ಕಾರವಾರ:
ಕಂದಾಯ ಸಚಿವ ಆರ್ ವಿ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದ ಘಟ್ಟದ ಬಳಿ ನಡೆದಿದೆ. ಇಂದು ಜಿಲ್ಲಾ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ ಕೆ ಡಿ ಪಿ ಸಭೆಗೆ ಸಚಿವ ಆರ್ .ವಿ ದೇಶಪಾಂಡೆ ಹಳಿಯಾಳ ದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ ವೇಳೆ ವಾಹನ ಆಯಾ ತಪ್ಪಿ ಪಲ್ಟಿಯಾಗಿ ಅಪಘಾತವಾಗಿದೆ.
ವಾಹನದಲ್ಲಿದ್ದ ಸಿಬ್ಬಂದಿಗಳಾದ ಮಾರುತಿ ನಾಯ್ಕ,ಚಾಲಕ ರಾಜೇಶ ನಾಯ್ಕ ಎನ್ನುವವರಿಗೆ ಗಾಯಗಳಾಗಿದ್ದು ಗಾಯಾಳುಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಕದ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಭೇಟಿಯಾದ ಸಚಿವ ಆರ್ ವಿ ದೇಶಪಾಂಡೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದು ನಂತರ ಕಾರವಾರದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಗೆ ತೆರಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
