ಪಾಟ್ನಾ:

ಬಿಹಾರ ಎಂದರೆ ತಕ್ಷಣ ಸಾಮಾನ್ಯವಾಗಿ ನೆನಪಿಗೆ ಬರುವುದು ಅಲ್ಲಿನ ರಾಜಕೀಯ ಮತ್ತು ಅಲ್ಲಿ ರೌಡಿಸಂ ಆದರೆ ಕೆಲವು ದಿನಗಳಿಂದ ಬಿಹಾರದಲ್ಲಿ ಎನ್ಸಿಫಾಲಿಟಿಸ್ ಎಂಬ ಮಹಾಂಮಾರಿ ಕಾಯಿಲೆ ಮರಣ ಮೃದಂಗ ಬಾರಿಸುತ್ತಿದೆ, ಈ ಮಾರಕ ಸೋಂಕು ಬರೋಬ್ಬರಿ 107 ಜನರನ್ನು ಬಲಿಪಡೆದಿದೆ.
ಈ ವರೆಗೂ ಸೋಂಕಿಗೆ ಸುಮಾರು 107 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಶ್ರೀಕೃಷ್ಣ ವೈದ್ಯಕೀಯ ಕಾಲೇಜಿನಲ್ಲಿ 88 ಮತ್ತು ಕೇಜ್ರಿವಾಲ್ ಆಸ್ಪತ್ರೆಯಲ್ಲಿ 19 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬಿಹಾರದಲ್ಲಿ ಬೇಸಿಗೆ ತಾಪಮಾನ ವ್ಯಾಪಕವಾಗಿ ಏರಿಕೆಯಾಗಿದ್ದು, ಇದೂ ಕೂಡ ಮಕ್ಕಳಲ್ಲಿ ಜ್ವರ ಹೆಚ್ಚಾಗಲು ಕಾರಣವಾಗಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಿದುಳು ಸೋಂಕು ಮಕ್ಕಳಲ್ಲಿ ವ್ಯಾಪಕವಾಗಿದ್ದು, ಸ್ಥಳೀಯವಾಗಿ ಇದನ್ನು ಚಮ್ಕಿ ಜ್ವರ ಎಂದು ಕರೆಯುತ್ತಾರೆ.
ಇನ್ನು ಎಇಎಸ್ ಸೋಂಕಿಗೆ ಬಲಿಯಾದವರ ಕುಟುಂಬಗಳಿಗೆ ಬಿಹಾರ ಸರ್ಕಾರ ನಾಲ್ಕು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಿದ್ದಾರೆ. ಇಡೀ ರಾಜಯದಲ್ಲಿ ವೈದ್ಯಾಧಿಕಾರಿಗಳೆಲ್ಲರೂ ಎಚ್ಚರದಿಂದ ಿರುವಂತೆ ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
