ಉಚಿತ ಬಸ್‍ಪಾಸ್ ನೀಡಬೇಕೆಂದು ಆಗ್ರಹಿಸಿ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ

ಬಳ್ಳಾರಿ

  ಶಿಕ್ಷಣವೆಂಬುದು ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು, ಆದರೆ 2018-19ನೇ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಎಸ್.ಸಿ/ಎಸ್.ಟಿ. ಸೇರಿದಂತೆ, ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು.

       ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ.ಇಂದಿನ ಖಾಸಗಿ ಕಾಲೇಜುಗಳ ಡೋನೆಷನ್ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

        ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‍ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಅಭಾವಿಪ ಆಗ್ರಹಿಸುತ್ತದೆ. ಹಳ್ಳಿಗಳಿಂದ ತಾಲ್ಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ.

       ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ಹಾಗೂ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಎಬಿವಿಪಿ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಕೊಡಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link