ಮಧುಗಿರಿ:
ರೈತನ ಮೇಲೆ ಕರಡಿಯೊಂದು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಜಿ.ಡಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ರೈತ ಕರಿಯಣ್ಣ ಎಂಬುವವರು ಕರಡಿ ದಾಳಿಗೆ ಒಳಗಾಗಿ ಗಾಯಗೊಂಡವರು. ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಪೊದೆಯೊಳಗಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ.
ಕರಿಯಣ್ಣನ ಕಿರುಚಾಟ ಕೇಳಿ ಸಮೀಪದಲ್ಲಿ ಇದ್ದವರು ಸ್ಥಳಕ್ಕೆ ಬಂದು ಕರಡಿಯನ್ನು ಓಡಿಸಿದ್ದಾರೆ. ದಾಳಿಯಲ್ಲಿ ಕರಿಯಣ್ಣನ ತಲೆ ಮತ್ತು ಕಾಲಿನ ಭಾಗಗಳಲ್ಲಿ ಗಾಯಗಳಾಗಿದ್ದು, ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
