ಮಂಡ್ಯ:
ಬಸ್ ಹಿಂದಿಕ್ಕುವ ವೇಳೆ ಎದುರಿನಿಂದ ಬಂದ ಮತ್ತೊಂದು ಬಸ್ಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬನ್ನಹಳ್ಳಿ ಗ್ರಾಮದ ಸಂಜು (17), ಮಹೇಂದ್ರ (16) ಸಾವಿಗೀಡಾದ ವ್ಯಕ್ತಿಗಳು. ಕೊತ್ತತ್ತಿಯ ಶ್ರೀವಿದ್ಯಾಗಣಪತಿ ಕಾಲೇಜಿನಲ್ಲಿ ಮಹೇಂದ್ರ ಹತ್ತನೇ ತರಗತಿ, ಸಂಜು ಪ್ರಥಮ ಪಿಯುಸಿ ಓದುತ್ತಿದ್ದರು. ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ, ಬೈಕ್ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಸಂಜು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಮಹೇಂದ್ರ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆ ಉಸಿರೆಳೆದಿದ್ದಾನೆ.
![](https://prajapragathi.com/wp-content/uploads/2019/06/182826-road-accident.jpg)