ರಾಯಚೂರು :
ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕಾ.? ಲಾಠಿ ಚಾರ್ಜಾ ಮಾಡಿಸಬೇಕಾ ನಿಮ್ಮ ಮೇಲೆ..? ಎಂದು ಸಿಎಂ ಕುಮಾರಸ್ವಾಮಿ ಗರಂ ಆಗಿರುವ ಘಟನೆ ಕರೇಗುಡ್ಡ ಗ್ರಾಮ ವಾಸ್ತವ್ಯ ಸ್ಥಳಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ನಡೆದಿದೆ.
ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕಿಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ವೇಳೆ ಸಿಟ್ಟಿಗೆದ್ದ ಸಿಎಂ, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿ ಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಗರಂ ಆಗಿದ್ದಾರೆ.
ವೈಟಿಪಿಎಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕರನ್ನು ಇತ್ತೀಚೆಗೆ ಕೆಲಸದಿಂದ ವಜಾ ಮಾಡಲಾಗಿತ್ತು. ಕಾರ್ಮಿಕರನ್ನು ಕೆಲಸಕ್ಕೆ ಮರು ನೇಮಕಾತಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿದರು. ಜೊತೆಗೆ ತುಂಗಾಭದ್ರಾ ಹಂಗಾಮಿ ಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಇನ್ನು ಕರೇಗುಡ್ಡ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಾಸ್ತವ್ಯ ಹೂಡಲಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/cmhdfkd.gif)