ಬೆಂಗಳೂರು:
ನಾನು ‘ಸಂವಿಧಾನಕ್ಕೆ ಬದ್ಧವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ್ದ ಅತೃಪ್ತ ಶಾಸಕರಿಗೆ ಸಭಾಧ್ಯಕ್ಷರು ಮಂಗಳವಾರದವರೆಗೆ ಸಮಯಾವಕಾಶ ನೀಡಿದ್ದರು. ಇಂದು ಕಚೇರಿಗೆ ಬಂದಿರುವ ರಮೇಶ್ ಕುಮಾರ್ ಅವರು, ‘ಸಂವಿಧಾನಕ್ಕೆ ಬದ್ಧವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ’ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ ಶಾಸಕ ಸ್ಥಾನಕ್ಕೆ ನೀಡಲಾಗಿರುವ ರಾಜೀನಾಮೆ ಪತ್ರಗಳ ಕುರಿತು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಇನ್ನು ಶನಿವಾರ 11.30ರವರೆಗೆ ಕಚೇರಿಯಲ್ಲಿದ್ದೆ. ನಾನು ಹೊರಟ ಮೇಲೆ ಶಾಸಕರು ಕಚೇರಿಗೆ ಬಂದಿದ್ದಾರೆ. ಅದಕ್ಕೂ ಮೊದಲು ಯಾರು ನನ್ನನ್ನು ಸಂಪರ್ಕಿಸಿರಲಿಲ್ಲ. ರಾಜೀನಾಮೆ ಸಲ್ಲಿಸುವುದಾಗಿ ಹೇಳಿರಲಿಲ್ಲ. ಯಾವುದೇ ಮಾಹಿತಿ ಇಲ್ಲದೆ ಇರುದುದ್ದರಿಂದ ಅನ್ಯ ಕಾರ್ಯ ನಿಮಿತ್ತ ಹೊರಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.
ಕಳೆದ ಶನಿವಾರ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನ 9 ಹಾಗೂ ಜೆಡಿಎಸ್ ನ ಮೂವರು ಶಾಸಕರು ರಾಜೀನಾಮೆ ಸಲ್ಲಿಸಿದ್ದರು.
ಇಂದು ಕಚೇರಿಗೆ ಆಗಮಿಸಲಿರುವ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸ್ಪೀಕರ್ ರಮೇಶ್ ಕುಮಾರ್ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಸಮ್ಮಿಶ್ರ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/02/ramesh-kumar-dh.jpg)