ಬೆಂಗಳೂರು:
ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ವಿಶ್ವಾಸ ಮತಯಾಚನೆ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ವಿಧಾನಸೌಧದ ಬಂದೋಬಸ್ತ್ಗಾಗಿ ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಎಲ್ಲಾ ದ್ವಾರಗಳಲ್ಲಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್ಪಿ ತುಕಡಿ, 21 ಸಿಎಆರ್ ತುಕಡಿ, ಕ್ಷಿಪ್ರ ಕಾರ್ಯಚರಣೆ ಪಡೆ ಮತ್ತು ವಾಟರ್ ಜೆಟ್, ಹೊಯ್ಸಳ, ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು, ಸಿಸಿಟಿವಿ ವ್ಯವಸ್ಥೆ ಕೂಡ ಮಾಡಲಾಗಿದೆ.
ಇನ್ನು ವಿಧಾನಸೌಧದ ಸುತ್ತಮುತ್ತ ಪೊಲೀಸ್ ಸರ್ಪಗಾವಾಲು ಹಾಕಲಾಗಿದ್ದು, ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿರುವ ಕಮೀಷನರ್, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧ ಮಾಡಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
