ದಾವಣಗೆರೆ:
ಲಂಚ ಸ್ವೀಕರಿಸುವಾಗ ಲೈನ್ ಮ್ಯಾನ್ ಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು.
ದಾವಣಗೆರೆಯ ಶ್ರಿರಾಮ್ ಎಂಬುವರು ಹಿಟ್ಟಿನ ಗಿರಣಿಯ ಹಿಂಬಾಕಿ ಬಿಲ್ ಗೆ 15 ಸಾವಿರ ದಂಡ ಪಾವತಿಸಬೇಕಿತ್ತು. ಶ್ರೀರಾಮ್ ಎನ್ನುವರಿಗೆ ದಂಡವನ್ನು ಸರಿಪಡಿಸಲು ರವಿಕುಮಾರ್ ಐದು ಸಾವಿರ ಬೇಡಿಕೆ ಇಟ್ಟಿದ್ದರು.
ಈ ಕುರಿತು ಹಿಟ್ಟಿನ ಗಿರಣಿ ಮಾಲೀಕ ಶ್ರೀರಾಮ್ ಎಸಿಬಿ ಗೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಕಚೇರಿ ಆವರಣದಲ್ಲಿರುವ ಗಣೇಶ ದೇವಸ್ಥಾನದ ಬಳಿ 5 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ರವಿಕುಮಾರ್ ನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ