ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ

ಬೆಂಗಳೂರು:

ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್  ಪುನರುಚ್ಚರಿಸಿದೆ.ದಾಳಿ ವೇಳೆದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

         ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ),

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಆ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು. ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap