ಕೆ ಎಸ್‌ ಅರ್‌ ಟಿ ಸಿ ಬಸ್ ಹಾಗೂ ಟ್ರಕ್ ಡಿಕ್ಕಿ : ಹಲವು ಪ್ರಯಾಣಿಕರಿಗೆ ಗಾಯ..!

ಶಿವಮೊಗ್ಗ :

     KSRTC ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾಗರ ತಾಲೂಕು ಆನಂದಪುರದ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕೆಎಸ್​ಆರ್​ಟಿಸಿ ಬಸ್​ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಶಾಲಾ ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಈ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ವೇಗವಾಗಿ ಬರ್ತಿದ್ದ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ KSRTC ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಅನೇಕ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿ ಆಗಿದೆ. 

   ಅಪಘಾತವು ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ದಾವಿಸಿದ್ರು. ಸಾಗರದ ಮರ್ಕಜ್‌ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಯಿತು

   ಕೆಎಸ್​ಆರ್​ಟಿಸಿ ಹಾಗೂ ಟ್ರಕ್​ ನಡುವೆ ಸಂಭವಿಸಿದ ಅಪಘಾತದ ಬಳಿಕ ಮುಂಬಾಳು ಬಳಿ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಯ್ತು. ಕೆಲ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಬಸ್​​ನಲ್ಲಿ 40 ರಿಂದ 50 ಮಂದಿ ಪ್ರಯಾಣ ಮಾಡ್ತಿದ್ರು ಎನ್ನಲಾಗ್ತಿದೆ.

Recent Articles

spot_img

Related Stories

Share via
Copy link