ಹೈದ್ರಾಬಾದ್ :
ಆಟೋ ರಿಕ್ಷಾ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ.
ಮೃತಪಟ್ಟವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಒಂದೇ ಆಟೋದಲ್ಲಿ ಸುಮಾರು 20 ಮಂದಿ ಮನೆಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆಯಲ್ಲಿ ವೇಗವಾಗಿ ಬರುತ್ತಿದ್ದ ಕಂಟೈನರ್ ಲಾರಿಯೊಂದು ಆಟೋಗೆ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಟ್ರಕ್ ಚಾಲಕ ಮಧ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ. ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಸಂಬಂಧ ನಲ್ಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/Auto-tempo-acc.jpg)