ಕಾರು- ಟಿಪ್ಪರ್ ನಡುವೆ ಭೀಕರ ಅಪಘಾತ : ಓರ್ವ ಸಾವು!!

ಹುಳಿಯಾರು : 

     ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುಳಿಯಾರು ಸಮೀಪದ ಮತಿಘಟ್ಟದ ಯುವಕ ಹಸೀಬುಲ್ಲ (28 ವರ್ಷ) ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ.

      ಮತಿಘಟ್ಟದಿಂದ ತನ್ನ ತಾಯಿಯನ್ನು ಹೊಸದುರ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಹಿಂದಿರುಗುತ್ತಿದ್ದ ವೇಳೆ ಹೊಸದುರ್ಗದ ಪೆಟ್ರೋಲ್ ಬಂಕ್ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಟ್ರಕ್ ಮುಖಾಮುಖಿಯಾಗಿ ನಡೆದ ಅಪಘಾತದಲ್ಲಿ ಹಸೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

      ಕಾರಿನಲ್ಲಿದ್ದ ಅವನ ತಂದೆಯ ಕಾಲಿಗೆ ಪೆಟ್ಟಾಗಿದ್ದು, ತಾಯಿ ಹಾಗೂ ಅವನ ಅತ್ತೆಗೂ ಸಹ ಅಪಘಾತದಲ್ಲಿ ಹೆಚ್ಚಿನ ಪೆಟ್ಟಾಗಿದ್ದು ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೆದುಕೊಂಡು ಹೋಗಲಾಗಿದೆ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap