ರಾಮನಗರ
ಕೆಲ ತಿಂಗಳುಗಳ ಹಿಂದೆ ಇನ್ನೂ ಉದ್ಗಾಟನೆಯಾಗದೆ ಇದ್ದಾಗಲೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಹಲವು ಅವಾತರಗಳಿಗೆ ಕಾರಣವಾಗಿತ್ತು ಈ ಉದ್ಗಾಟನೆಯಾದರೂ ಈ ಅವಾಂತರಗಳು ಕಡಿಮೆಯಾಗಿಲ್ಲ ಇನ್ನು ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು ವಾಹನಗಳು ಈ ಮಾರ್ಗವಾಗಿ ಚಲಿಸುತ್ತಿದ್ದು, ಜಲಾವೃತಗೊಂಡ ರಸ್ತೆಯಿಂದ ಸವಾರರು ಹೈರಾಣಾಗಿದ್ದಾರೆ.
ಹೆದ್ದಾರಿಯ ಕೆಳಸೇತುವೆ ಬಳಿ ನೀರು ನಿಂತಿದ್ದು, ವಾಹನಗಳು ಮುಂದಕ್ಕೆ ಚಲಿಸಲಾಗಿದೇ ವಾಹನ ದಟ್ಟಣೆ ಉಂಟಾಗಿದೆ. ಅಲ್ಲದೇ ಸರಣಿ ಅಪಘಾತಗಳು ಕೂಡ ನಡೆದಿದೆ. ದಶಪಥ ಹೆದ್ದಾರಿಯಲ್ಲಿ ಮಳೆ ಅವಾತರ ಹಿನ್ನೆಲೆಯಲ್ಲಿ ಮಳೆಯ ನೀರಿನಿಂದ ಕಾರು ಕೆಟ್ಟುನಿಂತಿದ್ದು, ಈ ವೇಳೆ ಹಿಂದೆ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
![](https://prajapragathi.com/wp-content/uploads/2023/03/Untitled-2-26.jpg)