ಅಪಘಾತ : ಎಎಸ್ಐ ಆಗಿ ಬಡ್ತಿ ಪಡೆಯಬೇಕಾಗಿದ್ದ ಪೊಲೀಸ್ ಸಾವು!!

ಚಿಕ್ಕಮಗಳೂರು:

      ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಪಡೆಯಬೇಕಾಗಿದ್ದ ಪೊಲೀಸ್ ಮುಖ್ಯಪೇದೆ​ವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

      48 ವರ್ಷದ ಸಿದ್ದರಾಮಪ್ಪ ಮೃತ ದುರ್ದೈವಿ. ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಅವರು ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು. ಬುಧವಾರ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಬಳಿ ಕಾರು-ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

      ವಿಷಯ ತಿಳಿಯುತ್ತಿದ್ದಂತೆ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

      ಜಿಲ್ಲೆಯ ವಿವಿಧ ಠಾಣೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ಎಎಸ್‍ಐ ಆಗಬೇಕಿದ್ದ ಸಿಬ್ಬಂದಿಯನ್ನು ಕಳೆದುಕೊಂಡಿದ್ದರಿಂದ ಇಲಾಖೆ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap