ನವದೆಹಲಿ:
ತಿಹಾರ್ ಜೈಲಿನಲ್ಲಿ ಮತ್ತೊಂದು ಗ್ಯಾಂಗ್ ವಾರ್ ನಡೆದಿದ್ದು, ಕುಖ್ಯಾತ ರೌಡಿ ತಿಲ್ಲು ತಾಜ್ಪುರಿಯಾನನ್ನು ಹತ್ಯೆ ಮಾಡಲಾಗಿದೆ.
ತಿಹಾರ್ ಜೈಲಿನಲ್ಲಿ ಮತ್ತೊಮ್ಮೆ ಗ್ಯಾಂಗ್ವಾರ್ ನಡೆದ ವರದಿಯಾಗಿದ್ದು ರೌಡಿ ತಿಲ್ಲು ತಾಜ್ಪುರಿಯಾನನ್ನು ಹತ್ಯೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ನಾಲ್ವರು ಕೈದಿಗಳು ತಿಲ್ಲು ತಾಜ್ಪುರಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದು, ಇವರು ಗೋಗಿ ಗ್ಯಾಂಗ್ಗೆ ಸೇರಿದವರು ಎನ್ನಲಾಗಿದೆ.
ಹಲ್ಲೆ ಬಳಿಕ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆತ ಅಷ್ಚು ಹೊತ್ತಿಗಾಗಲೇ ಸಾವನ್ನಪ್ಪಿದ್ದ ಎಂದು ಆತನನ್ನು ಪರೀಕ್ಷಿಸಿದ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದು, ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್ ಅವರು ಜೈಲಿನ ಮೊದಲ ಮಹಡಿಯಲ್ಲಿರುವ ಅವರ ವಾರ್ಡ್ನ ಕಬ್ಬಿಣದ ಗ್ರಿಲ್ಗಳನ್ನು ಮುರಿದು ನುಗ್ಗಿದ್ದಾರೆ. ಅವರು ತಮ್ಮ ಇತರ ಗ್ಯಾಂಗ್ ಸದಸ್ಯರೊಂದಿಗೆ ನೆಲ ಅಂತಸ್ತಿನ ವಾರ್ಡ್ನಲ್ಲಿ ಇರಿಸಲಾಗಿದ್ದ ಟಿಲ್ಲು ಅವರ ಮೇಲೆ ಅದೇ ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
