ಮಾಧ್ಯಮ ಪ್ರಶ್ನೆಗಳಿಗೆ ಅಜಯ್ ಮಕಾನ್ ಅವರ ಉತ್ತರ

ಅಲ್ ಖೈದಾ ಹಾಗೂ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲಿಸುತ್ತಿವೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೊದಲು ಒಂದು ವಿಚಾರ ಸ್ಪಷ್ಟಪಡಿಸುತ್ತೇವೆ. ನಾವು ಹಿಜಾಬ್ ವಿಚಾರವಾಗಿ ಅಲ್ ಖೈದಾ ಸಂಘಟನೆ ನಾಯಕರ ಹೇಳಿಕೆಯನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಅಲ್ ಖೈದಾ ನಿಷೇಧಿತ ಉಗ್ರ ಸಂಘಟನೆ.

ಆ ಸಂಘಟನೆಗೆ ಭಾರತದ ಆಂತರಿಕ ವಿಚಾರವಾಗಿ ಮಾತನಾಡುವ ಯಾವುದೇ ಹಕ್ಕಿಲ್ಲ. ನಮ್ಮ ದೇಶದ ವಿಚಾರವನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ, ಹೊರಗಿನವರ ಹಸ್ತಕ್ಷೇಪ ಬೇಕಾಗಿಲ್ಲ. ಇನ್ನು ಇದೇ ಸಮಯದಲ್ಲಿ ನಾವು ರಾಜ್ಯದ ಗೃಹಮಂತ್ರಿಗಳ ನಡೆಯನ್ನು ಖಂಡಿಸುತ್ತೇವೆ. ಇವರಿಬ್ಬರೂ ಮಾಡುತ್ತಿರುವುದು ಒಂದೇ ಆಗಿದೆ. ಇವರಿಬ್ಬರೂ ತಮ್ಮ ಹೇಳಿಕೆ ಮೂಲಕ ದೇಶದ ವಾತಾವರಣ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಇವರು ಇಲ್ಲಿ ಬಲಪಂಥೀಯರಾದರೆ, ಅಲ್ ಖೈದಾ ಆ ದೇಶದ ಬಲಪಂಥೀಯರಾಗಿದ್ದಾರೆ. ಒಂದು ಬಲಪಂಥೀಯರು, ಮತ್ತೊಂದು ಬಲಪಂಥೀಯರಿಗೆ ಸಹಾಯ ಮಾಡುತ್ತಿದ್ದಾರೆ.

ರಾಷ್ಟ್ರಪತಿ ಚುನಾವಣೆ; ಪ್ರಧಾನಿ ಮೋದಿ ಆಯ್ಕೆ ಯಾರು?

ಹೀಗಾಗಿ ಈ ಸಂದರ್ಭದಲ್ಲಿ ರಾಜ್ಯದ ಜನರಲ್ಲಿ ಒಂದು ಮನವಿ ಮಾಡಿಕೊಳ್ಳುತ್ತೇನೆ. ಕರ್ನಾಟಕ ರಾಜ್ಯ ಅದರದೇ ಆದ ಸಂಸ್ಕೃತಿಯನ್ನು ಹೊಂದಿದೆ. ಇದೇ ಕಾರಣಕ್ಕೆ ಈ ಪ್ರದೇಶ ವಿಶ್ವದ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈ ವಾತಾವರಣವನ್ನು ಕದಡಿ ಬೆಂಗಳೂರಿನ ಘನತೆ ನಾಶ ಮಾಡಬೇಡಿ. ಇದು ಕೇವಲ ಘನತೆ ಮಾತ್ರವಲ್ಲ ರಾಜ್ಯದ ಆರ್ಥಿಕತೆಯನ್ನು ನಾಶ ಮಾಡುತ್ತದೆ.’ ಎಂದರು.

ಇನ್ನು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹೇಳಿಕೆ ಯಾವ ಸಂದೇಶ ನೀಡುತ್ತಿದೆ? ಇವರು ಕೂಡ ಅಲ್ ಖೈದಾ ಮಾಡುತ್ತಿರುವ ಕೆಲಸವನ್ನು ಮಾಡುತ್ತಿದ್ದಾರೆ. ಅಲ್ ಖೈದಾ ಅವರು ಹೇಗೆ ಪರಿಸ್ಥಿತಿಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೋ ಅದೇ ರೀತಿ ಇವರು ಕೂಡ ತಮ್ಮ ಮಾತುಗಳಿಂದ ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ಇವರು ತಮ್ಮ ಧರ್ಮಕ್ಕೆ ಅತಿರೇಕದ ಹೆಜ್ಜೆ ಇಟ್ಟರೆ, ಅಲ್ಲಿ ಅವರು ಅವರ ಧರ್ಮಕ್ಕಾಗಿ ಅತಿರೇಕದ ಹೆಜ್ಜೆ ಇಡುತ್ತಿದ್ದಾರೆ. ಹಾಗಾದರೆ ಇವರಿಬ್ಬರ ನಡುವೆ ವ್ಯತ್ಯಾಸ ಎಲ್ಲಿದೆ? ರಾಜ್ಯದ ಘನತೆ, ಭವಿಷ್ಯ ಉಳಿಸಲು ದಯಮಾಡಿ ಶಾಂತಿ ಕದಡುವ ಪ್ರಯತ್ನ ಮಾಡಬೇಡಿ. ಇದರಿಂದ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಲಿದೆ’ ಎಂದರು.

ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

ಇನ್ನು ಹಲಾಲ್, ವ್ಯಾಪಾರ ನಿಷೇಧ, ಧ್ವನಿವರ್ಧಕ ನಿಷೇಧ ವಿಚಾರಗಳ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಜ್ಯ ಸರ್ಕಾರ ಈಗ ಯಾಕೆ ಈ ವಿಚಾರಗಳನ್ನು ಪ್ರಸ್ತಾಪಿಸುತ್ತಿದೆ. ಕಾರಣ, ಅವರು ತಮ್ಮ ವೈಫಲ್ಯಗಳು, 40% ಕಮಿಷನ್ ಭ್ರಷ್ಟಾಚಾರದ ಆರೋಪದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿರುವ ರಾಜ್ಯ ಕರ್ನಾಟಕವಾಗಿದೆ.

ಬೆಲೆ ಏರಿಕೆ ವಿಚಾರವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಸಂಪುಟ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪವನ್ನು ಬೇರೆಡೆಗೆ ಸೆಳೆಯಲು ಈ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನೆ ಮಾಡದಂತೆ ತಡೆಯಲು, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿನ ವಿಚಾರಗದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಆದರೆ ಕರ್ನಾಟಕ ರಾಜ್ಯದ ಜನ ಪ್ರಬುದ್ಧರಾಗಿದ್ದು, ಬಿಜೆಪಿ ಹಾಗೂ ಆರ್ ಎಸ್ಎಸ್ ಷಡ್ಯಂತ್ರಗಳಿಗೆ ಅವರು ಸಿಲುಕುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಉತ್ತರಿಸಿದರು.

ಕನ್ನಡ ಕಲಿಕೆ ಕಡ್ಡಾಯಕ್ಕೆ ತಡೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬಿಜೆಪಿಯ ಈ ತಂತ್ರವನ್ನು ಕಾಂಗ್ರೆಸ್ ಹೇಗೆ ಎದುರಿಸಲಿದೆ ಎಂಬ ಪ್ರಶ್ನೆಗೆ, ‘ನಾವು ಜನರ ಸಮಸ್ಯೆಗಳನ್ನು ಅಅವರ ಮುಂದೆ ಇಟ್ಟು ಹೋರಾಟ ಮಾಡುತ್ತೇವೆ. ಅದೇ ಕಾರಣಕ್ಕಾಗಿ ನಾನು ಬೆಲೆ ಏರಿಕೆ ವಿಚಾರವಾಗಿ ಮಾತನಾಡಲು ದೆಹಲಿಯಿಂದ ಇಲ್ಲಿಗೆ ಆಗಮಿಸಿದ್ದೇನೆ. ನಾವು ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದೇವೆ. ಇಂತಹ ಜನಪರ ವಿಚಾರಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟು ಮಾಧ್ಯಮಗಳು ಸಹಕಾರ ನೀಡಬೇಕು. ಜೇಬು, ಹೊಟ್ಟೆಪಾಡು ಹಾಗೂ ಉದ್ಯೋಗದ ವಿಚಾರ ಬಂದರೆ ಜನ ಖಂಡಿತವಾಗಿಯೂ ಎಚ್ಛೆತ್ತುಕೊಳ್ಳುತ್ತಾರೆ’ ಎಂದು ತಿಳಿಸಿದರು.

ಪಂಚರಾಜ್ಯ ಚುನಾವಣೆಯಲ್ಲಿ ಜನ ಈ ವಿಚಾರವಾಗಿ ತಲೆಕೆಡಿಸಿಕೊಂಡಿಲ್ಲ, ಕರ್ನಾಟಕದಲ್ಲಿ ಜನ ಚಿಂತನೆ ನಡೆಸುತ್ತಾರಾ ಎಂಬ ಪ್ರಶ್ನೆಗೆ, ‘ಖಂಡಿತವಾಗಿಯೂ ತಲೆ ಕೆಡಿಸಿಕೊಳ್ಳುತ್ತಾರೆ. ಈ ವಿಚಾರಗಳನ್ನು ರಾಜ್ಯದಲ್ಲಿ ಜನರ ಮುಂದೆ ಇಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇದರಿಂದ ಬಿಜೆಪಿ ಭಯಭೀತರಾಗಿರುವ ಕಾರಣಕ್ಕೆ ಅವರು ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ’ ಎಂದರು.

ಆಹಾರ ಬೆಲೆ ಏರಿಕೆ ವಿಚಾರವಾಗಿ ಯಾಕೆ ಪ್ರಸ್ತಾಪಿಸಿಲ್ಲ ಎಂಬ ಪ್ರಶ್ನೆಗೆ, ‘ನಾವು ಈಗ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಮಾತ್ರ ನಾವು ಪ್ರಶ್ನಿಸಿದ್ದೇವೆ. ಈ ಎಲ್ಲ ಬೆಲೆ ಏರಿಕೆಗಳ ಅಂತಿಮ ಪರಿಣಾಮವೇ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರ ಬೆಲೆ ಹೆಚ್ಚಿದರೆ, ಅದು ರೈತರ ಮೇಲೆ ಪರಿಣಾಮ ಬೀರುತ್ತದೆ. ಆಗ ಆಹಾರ ಪದಾರ್ಥಗಳ ದರ ಕೂಡ ಹೆಚ್ಚುತ್ತದೆ’ ಎಂದು ಉತ್ತರಿಸಿದರು.

ಸಚಿವ ಅರಗ ಜ್ಞಾನೇಂದ್ರ ವಜಾಗೊಳಿಸಲು ಸಿಎಂಗೆ ಡಿ.ಕೆ. ಶಿವಕುಮಾರ್ ಆಗ್ರಹ

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link