ರಾಯಬರೇಲಿ:
ಮುಂದಿನ ಲೋಕ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಠೇವಣಿ ಕಳೆದುಕೊಳ್ಳಲಿದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ರೈ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಥಿಯಲ್ಲಿ ಠೇವಣಿ ಕಳೆದುಕೊಳ್ಳಲಿದ್ದಾರೆ. ಬಿಜೆಪಿ ತನ್ನ ಸ್ವಂತ ಸಚಿವರ ಮನೆಯಲ್ಲಿ ಏನಾಗುತ್ತಿದೆ ಎಂಬುದನ್ನು ಮೊದಲು ಗಮನಿಸಬೇಕು ಎಂದು ಹೇಳಿದರು.
![](https://prajapragathi.com/wp-content/uploads/2023/09/smrithi-irani.gif)