ಮಹಾರಾಷ್ಟ್ರ ಭೂಷಣ ಕಾರ್ಯಕ್ರಮದ ಅವಾಂತರ : ನ್ಯಾಯಾಂಗ ತನಿಖೆಗೆ ಅಜಿತ್‌ ಆಗ್ರಹ

ಮುಂಬೈ: 

      ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್ ಗುರುವಾರ ಒತ್ತಾಯಿಸಿದ್ದಾರೆ.

      ಈ ಮಧ್ಯೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು 14 ಜನರ ಸಾವಿನ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಕಂದಾಯ) ನಿತಿನ್ ಕೀರ್ ಅವರ ಏಕಸದಸ್ಯ ಸಮಿತಿ ರಚಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

 
     ಆರಂಭದಲ್ಲಿ, ಬಿಸಿಲಿನ ತಾಪದಿಂದ 14 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ನಂತರ ಕೆಲವು ವರದಿಗಳು ಏಪ್ರಿಲ್ 16 ರ ಈವೆಂಟ್‌ನಲ್ಲಿ ಕಾಲ್ತುಳಿತದಿಂದ ಸಾವು ಸಂಭವಿಸಿದೆ ಎಂದು ಹೇಳಿರುವುದಾಗಿ ಎಂದು ಎನ್‌ಸಿಪಿ ನಾಯಕ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap