ಅಕ್ರಮ ಹಣ ವರ್ಗಾವಣೆ ಪ್ರಕರಣ : ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂನಿಂದ ಜಾಮೀನು

ನವದೆಹಲಿ:

   ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಬ್ಬಾಸ್ ಅನ್ಸಾರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

   ದಿವಂಗತ ಗ್ಯಾಂಗ್​ಸ್ಟರ್ – ರಾಜಕಾರಣಿ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ನವೆಂಬರ್ 2022 ರಿಂದ ಜೈಲಿನಲ್ಲಿದ್ದಾರೆ. ಅವರ ತಂದೆ ಕೆಲವು ತಿಂಗಳ ಹಿಂದೆ ಕಸ್ಟಡಿಯಲ್ಲಿ ನಿಧನರಾಗಿದ್ದರು.

   ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಅನ್ಸಾರಿ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ, ಅಬ್ಬಾಸ್ ಅನ್ಸಾರಿಗೆ ಬಿಗ್ ರಿಲೀಫ್ ನೀಡಿದೆ. ಅಲಹಾಬಾದ್ ಹೈಕೋರ್ಟ್ ಮೇ 9 ರಂದು ಅನ್ಸಾರಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

Recent Articles

spot_img

Related Stories

Share via
Copy link