ಹಳೆಯ ಪ್ರಕರಣದ ವಿಮೋಚನೆಗಾಗಿ ಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್…!

ತೆಲಂಗಾಣ :

    ಅಲ್ಲು ಅರ್ಜುನ್ ಟಾಲಿವುಡ್​ನ ಸ್ಟಾರ್ ನಟ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಳೆದ ವರ್ಷ ‘ಪುಷ್ಪ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಸಹ ಅಲ್ಲು ಅರ್ಜುನ್​ಗೆ ದೊರೆತಿದೆ. ಈಗ ‘ಪುಷ್ಪ 2’ ಸಿನಿಮಾದ ಬಿಡುಗಡೆಯ ಹೊಸ್ತಿಲಲ್ಲಿದ್ದಾರೆ. ‘ಪುಷ್ಪ 2’ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದು, ಸಿನಿಮಾ ಬಿಡುಗಡೆಗೆ ಮುಂಚೆಯೇ 1000 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಅಲ್ಲು ಅರ್ಜುನ್ ವೃತ್ತಿ ಜೀವನವಂತೂ ಭಾರಿ ಏರು ಗತಿಯಲ್ಲಿ ಸಾಗುತ್ತಿದೆ.

   ಆದರೆ ಇದೇ ಸಮಯದಲ್ಲಿ ಸಮಸ್ಯೆಯೊಂದು ಎದುರಾಗಿ ಅದರಿಂದ ಪರಿಷ್ಕಾರ ಪಡೆಯಲು ಅಲ್ಲು ಅರ್ಜುನ್ ಆಂಧ್ರ ಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲು ಅರ್ಜುನ್, ತಮ್ಮ ಮೇಲಿರುವ ಹಳೆಯ ಪ್ರಕರಣವೊಂದರಿಂದ ವಿಮೋಚನೆ ಬಯಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

   ಅಲ್ಲು ಅರ್ಜುನ್, ಶಿಲ್ಪಾ ರವಿಚಂದರ್ ಕಿಶೋರ್ ರೆಡ್ಡಿ ಗೆ ಬೆಂಬಲ ಸೂಚಿಸಿ ಅವರ ಪರ ಪ್ರಚಾರ ಮಾಡಿದ್ದು ಭಾರಿ ಸುದ್ದಿಯಾಗಿತ್ತು. ಆ ಸಮಯದಲ್ಲಿ ಅಲ್ಲು ಅರ್ಜುನ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಸೆಕ್ಷನ್ 144, ಪೊಲೀಸ್ ಕಾಯ್ದೆ 30 ಅಡಿಯಲ್ಲಿ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾದ ಪ್ರಕರಣಗಳನ್ನು ರದ್ದು ಮಾಡುವಂತೆ ಅಲ್ಲು ಅರ್ಜುನ್, ಆಂಧ್ರ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.
 
   ಅಲ್ಲು ಅರ್ಜುನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಂಧ್ರ ಹೈಕೋರ್ಟ್​ ಇಂದು ನಡೆಸಲಿದೆ. ಅಲ್ಲು ಅರ್ಜುನ್ ವಿರುದ್ಧ ಪ್ರಕರಣವನ್ನು ಕೈಬಿಡುವಂತೆ ನ್ಯಾಯಾಲಯ ಸೂಚಿಸಲಿದೆಯೇ ಅಥವಾ ಪ್ರಕರಣದ ವಿಚಾರಣೆ ಮುಂದುವರೆಯಲಿದೆಯೇ ಕಾದು ನೋಡಬೇಕಿದೆ.

ವೈಸಿಪಿ ಅಭ್ಯರ್ಥಿಯಾಗಿದ್ದ ಶಿಲ್ಪಾ ರವಿಚಂದರ್ ಕಿಶೋರ್ ರೆಡ್ಡಿ ಪರವಾಗಿ ಅಲ್ಲು ಅರ್ಜುನ್ ಪ್ರಚಾರ ಮಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ತಮ್ಮ ಅತ್ಯಂತ ಹತ್ತಿರದ ಸಂಬಂಧಿಯಾದ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡದಿದ್ದ ಅಲ್ಲು ಅರ್ಜುನ್, ಪವನ್​ರ ಎದುರಾಳಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದು ಟೀಕೆಗೆ ಗುರಿಯಾಗಿತ್ತು.

  

Recent Articles

spot_img

Related Stories

Share via
Copy link
Powered by Social Snap