ಕ್ಯಾಂಪ್ಕೋ ಸಾಧನೆ ಶ್ಲಾಘಿಸಿದ ಅಮಿತ್‌ ಷಾ…!

ದಕ್ಷಿಣ ಕನ್ನಡ

      ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರೈತರ ಕಷ್ಟ ಅರಿತು ಅವರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಲು ರಾಷ್ಟ್ರ ಮಟ್ಟದಲ್ಲಿ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

     ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ಕ್ಷೇತ್ರದಲ್ಲಿ ರಾಜ್ಯ ಸಹಕಾರಿ ಕ್ಯಾಂಪ್ಕೊದ ಸಾಧನೆ ಅದ್ಭುತವಾಗಿದೆ ಎಂದು ಶ್ಲಾಘಿಸಿದ್ದಾರೆ.

ದಕ್ಷಿಣ ಕನ್ನಡ ಪ್ರದೇಶವು ಪಶ್ಚಿಮ ಘಟ್ಟಗಳು ಮತ್ತು ಅರಬ್ಬಿ ಸಮುದ್ರದ ನಡುವೆ ಇರುವ ‘ಪವಿತ್ರ ಭೂಮಿ’ ಎಂದು ಶ್ಲಾಘಿಸಿರುವ ಅಮಿತ್ ಶಾ, ಗುಜರಾತಿಗಳು ಸುಪಾರಿ ಸೇವಿಸಿದಾಗ ಯಾವಾಗಲೂ ಮಂಗಳೂರಿನ ಬಗ್ಗೆ ಯೋಚಿಸುತ್ತಾರೆ. ನಾವು ಗಟ್ಟಿಯಾದ ಸಾಂಪ್ರದಾಯಿಕ ಸಂಪರ್ಕವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

      1973 ರಲ್ಲಿ ಸುಮಾರು 3,500 ಸದಸ್ಯರೊಂದಿಗೆ ಪ್ರಾರಂಭವಾದ ಕ್ಯಾಂಪ್ಕೊ ಈಗ 1.38 ಲಕ್ಷ ರೈತ ಸದಸ್ಯರನ್ನು ಹೊಂದಿದೆ ಮತ್ತು ವಾರ್ಷಿಕ ಸುಮಾರು 3,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು. ಕಳೆದ 50 ವರ್ಷಗಳಲ್ಲಿ ಅವರ ಸಮರ್ಪಣಾ ಮನೋಭಾವದ ಕೆಲಸಕ್ಕೆ ಇದು ಪ್ರಮಾಣಪತ್ರವಾಗಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap