4ನೇ ರಥ ಉದ್ಘಾಟನೆಗೆ ಅಮಿತ್ ಶಾ: ಆರ್.ಅಶೋಕ್

ಬೆಂಗಳೂರು

     ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ?ಜಗನ್ನಾಥ ಭವನ?ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಇದೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ 4ನೇ ರಥ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು.

     ಡಬಲ್ ಎಂಜಿನ್ ಸರಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ್ಯಾಲಿ ನಡೆಸಲಿದೆ. ಅಶ್ವತ್ಥನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್, ಇನ್ನೂ ಹಲವಾರು ಎಂಎಲ್‌ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ ಎಂದು ತಿಳಿಸಿದರು.

     ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ ಎಂದು ಮಾಹಿತಿ ನೀಡಿದರು.

    ಕೊನೆಯಲ್ಲಿ ದಾವಣಗೆರೆಯಲ್ಲಿ 25ರಂದು ನರೇಂದ್ರ ಮೋದಿಜಿ ಅವರು ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ್ಯಾಲಿ ಮೂಲಕ ಮೋದಿಜಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ. ದೇವನಹಳ್ಳಿಯಲ್ಲಿ ಇವತ್ತು ವೇದಿಕೆ ವೀಕ್ಷಿಸಲಿದ್ದೇನೆ ಎಂದರು. ಕಳೆದ 3 ತಿಂಗಳಿನಿAದ ನಡೆದ ಸರ್ವೇಗಳಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ನಾವು ಬಹುಮತ ದಾಟಿ ಅತಿ ಹೆಚ್ಚು ಸ್ಥಾನಗಳೊಂದಿಗೆ ವಿಧಾನಸಭೆಯಲ್ಲಿ ಅಧಿಕಾರ ಪಡೆಯಲಿದ್ದೇವೆ ಎಂದು ತಿಳಿಸಿದರು. ಯಡಿಯೂರಪ್ಪ, ಜನಾರ್ದನ ರೆಡ್ಡಿಯವರು ಜೈಲಿಗೆ ಹೋಗಲು ಕಾಂಗ್ರೆಸ್ ಕಾರಣ ಎಂದು ಅವರು ಆರೋಪಿಸಿದರು.

    ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ತಾಂಡಾದವರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು. ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಅವರು ಒಯಸಿಸ್‌ಗೆ ಹುಡುಕಾಡುತ್ತಿದೆ. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಟೀಕಿಸಿದ ಅವರು, 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

    ಇನ್ನು ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀರ‍್ಶಿಪ್ ಇದೆ. ಅವರಲ್ಲಿ (ಕಾಂಗ್ರೆಸ್) ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು. ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ, ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap