ಚಂಡೀಗಢ:
ಖಲಿಸ್ತಾನ್ ವಾದಿ ಪ್ರಚಾರಕ ಮತ್ತು ತೀರ್ವಗಾಮಿ ಪ್ರತಿವಾದಿ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ‘ವಾರಿಸ್ ಪಂಜಾಬ್ ದೇ’ ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ.
ಇನ್ನು ಇದೇ ವೇಳೆ ಪಂಜಾಬ್ ಪೊಲೀಸರು “ನಕಲಿ ಎನ್ಕೌಂಟರ್”ನಲ್ಲಿ ಅಮೃತ್ ಪಾಲ್ ಸಿಂಗ್ ರನ್ನು ಕೊಲೆಗೈಯ್ಯಲು ಸಂಚು ರೂಪಿಸಿದ್ದು ಇದೇ ಕಾರಣಕ್ಕೆ ಆತನ ಬಂಧನ ಕಾರ್ಯಾಚರಣೆಯ ನಾಟಕವಾಡುತ್ತಿದ್ದಾರೆ ಎಂದು ಇಮಾನ್ ಸಿಂಗ್ ಖಾರಾ ಆರೋಪಿಸಿದ್ದಾರೆ. ಅಮೃತಪಾಲ್ ಸಿಂಗ್ ಅವರ ಜೀವ ಬೆದರಿಕೆಯನ್ನು ಉಲ್ಲೇಖಿಸಿ, ವಕೀಲ ಖಾರಾ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ರಿಟ್ ಅರ್ಜಿ ಕೂಡ ಸಲ್ಲಿಸಿದ್ದಾರೆ.
“ಇಂದು ನಾನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಕ್ರಿಮಿನಲ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದೇನೆ. ಇದು ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಯಾಗಿದೆ” ಎಂದು ಅವರು ಸುದ್ದಿಸಂಸ್ಥೆಗೆ ತಿಳಿಸಿದರು. ‘ಭಾರತದ ಸಂವಿಧಾನದ 21ನೇ ವಿಧಿ ಪ್ರಕಾರ ಬದುಕುವ ಹಕ್ಕು, ನ್ಯಾಯಾಲಯದ ವಿಚಾರಣೆ ಇಲ್ಲದೆ ಪೊಲೀಸರು ಯಾರನ್ನೂ ಹೊಡೆಯುವಂತಿಲ್ಲ. ಈ ಅರ್ಜಿಯಲ್ಲಿ ಅಮೃತಪಾಲ್ ಸಿಂಗ್ ಅವರಿಗೆ ಜೀವ ಬೆದರಿಕೆಯಿದ್ದು, ಅವರನ್ನು ಶಾಹಕೋಟ್ ಪೊಲೀಸ್ ಠಾಣೆಯಲ್ಲಿ ಬಂಧಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ