ಪ್ರಸಿದ್ಧ ರಂಗಭೂಮಿ ನಿರ್ದೇಶಕಿ ಅನಸೂಯಾ ವೈದ್ಯ ಶೆಟ್ಟಿ ನಿಧನ…!

ನವದೆಹಲಿ: 

     ರಂಗಭೂಮಿ ದಿಗ್ಗಜೆ ಮತ್ತು ರಾಷ್ಟ್ರ ರಾಜಧಾನಿಯ ಐಕಾನಿಕ್ ಅಕ್ಷರ ಥಿಯೇಟರ್‌ನ ಸಹ ಸಂಸ್ಥಾಪಕಿ ಜಲಬಾಲ ವೈದ್ಯ ಅವರು ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಮತ್ತು ರಂಗಭೂಮಿ ನಿರ್ದೇಶಕಿ ಅನಸೂಯಾ ವೈದ್ಯ ಶೆಟ್ಟಿ ಅವರು ತಿಳಿಸಿದ್ದಾರೆ. 

      ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ  86 ವರ್ಷ ವೈದ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

      ಭಾರತೀಯ ಲೇಖಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುರೇಶ್ ವೈದ್ಯ ಮತ್ತು ಇಂಗ್ಲಿಷ್ ಶಾಸ್ತ್ರೀಯ ಗಾಯಕಿ ಮ್ಯಾಡ್ಜ್ ಫ್ರಾಂಕೀಸ್ ದಂಪತಿಗೆ ಲಂಡನ್‌ನಲ್ಲಿ ಜನಿಸಿದ ಜಲಬಾಲ ವೈದ್ಯ ಅವರು ದೆಹಲಿಯ ವಿವಿಧ ರಾಷ್ಟ್ರೀಯ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಿಗೆ ಬರೆಯುತ್ತಾ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ವೈದ್ಯ ಅವರು ನವದೆಹಲಿಯ ಲಿಂಕ್ ಮ್ಯಾಗಜೀನ್‌ನಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು, ಅಲ್ಲಿ ಅವರಿಗೆ ಪರಿಚಯವಾದ ಗೋಪಾಲ್ ಶರ್ಮನ್ ಅವರನ್ನು ವಿವಾಹವಾದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap