‘ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್’ಗೆ ಕೊರೋನಾ ಪಾಸಿಟಿವ್!!

ಬೆಂಗಳೂರು : 

     ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

      ಈಗಾಗಲೇ ರಾಜ್ಯದಲ್ಲಿ ಅನೇಕ ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಬಿಬಿಎಂಪಿ ಆಯುಕ್ತರಾದಂತ ಮಂಜುನಾಥ್ ಪ್ರಸಾದ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಈ ಮೂಲಕ ಅವರಿಗೂ ಕೊರೋನಾ ಶಾಕ್ ಕೊಟ್ಟಿದೆ.

      ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಾವು ಇತ್ತೀಚೆಗೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದು, ತಮ್ಮ ಕೊರೋನಾ ಲ್ಯಾಬ್ ರಿಪೋರ್ಟ್ ಬಂದಿದ್ದು, ತನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಎರಡು ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದಂತ ಎಲ್ಲಾ ಅಧಿಕಾರಿಗಳು, ವ್ಯಕ್ತಿಗಳು ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap