ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ

ಬೆಂಗಳೂರು :

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದ್ದು, ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ.

ಶುಕ್ರವಾರದಂದು ವಿಕಾಸಸೌಧದಲ್ಲಿ ಸಂಚಾರಿ ಪಶು ಅಂಬುಲೆನ್ಸ್ ಅನ್ನು ಪರೀಕ್ಷಿಸಿದ ಬಳಿಕ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಈ ಮಾಹಿತಿ ನೀಡಿದ್ದು, ಮೇ 7ರಂದು ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ ರೂಪಾಲ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಆಂಬುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದರು.

PSI ನೇಮಕಾತಿ ರದ್ದು ಮಾಡಿದ ‘ರಾಜ್ಯ ಸರ್ಕಾರ’: ಹೆಚ್ಚಿದ ಆಕ್ರೋಶ, ವ್ಯಾಪಕ ಟೀಕೆ, ಇಂದಿನಿಂದ ಉಪವಾಸ ಸತ್ಯಾಗ್ರಹ

 

ಒಟ್ಟು 275 ಪಶು ಅಂಬುಲೆನ್ಸ್ ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು ಈ ಪೈಕಿ ಮೇ 7ರಂದು 70 ಅಂಬುಲೆನ್ಸ್ ಗಳನ್ನು ಜಾನುವಾರಗಳ ಸೇವೆಗೆ ಲೋಕಾರ್ಪಣೆ ಮಾಡುತ್ತಿರುವುದಾಗಿ ತಿಳಿಸಿದ ಅವರು, ಇದರಿಂದ ಜಾನುವಾರುಗಳನ್ನು ಸಾಕುತ್ತಿರುವ ರೈತರಿಗೆ ಅನುಕೂಲವಾಗಲಿದೆ ಎಂದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap