ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸಲ್ಲಿಸಿದ ಮನವಿ ಪತ್ರ !

ಬೆಂಗಳೂರು:

ಗೆ.
ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು,
ಗೌರವಾನ್ವಿತ ರಾಜ್ಯಪಾಲರು,
ಕರ್ನಾಟಕ ರಾಜಭವನ,
ಬೆಂಗಳೂರು-560001

ಗೌರವಾನ್ವಿತರೆ,

ನಾವು ತಮ್ಮಲ್ಲಿ ಗೌರವಪೂರ್ವಕವಾಗಿ ಮನವಿ ಮಾಡುವುದೇನೆಂದರೆ, ಬೆಳಗಾವಿ ಜಿಲ್ಲೆಯ ಶ್ರೀ ಸಂತೋಷ ಕೆ.ಪಾಟೀಲ್ ಅವರು ಓರ್ವ ಗುತ್ತಿಗೆದಾರ ಮತ್ತು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. ಇವರು ದಿನಾಂಕ 12-04-2022 ರಂದು ಉಡುಪಿಯ ಶಾಂಭವಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಆತ್ಮಹತ್ಯೆಗೆ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಚಿವರು ಆತ್ಮಹತ್ಯೆಗೆ ನೇರ ಹೊಣೆಯಾಗಿದ್ದು ಅವರಿಗೆ ತಕ್ಕ ಶಿಕ್ಷೆಯಾಗಬೇಕು.

ಇದಲ್ಲದೆ, ಮೃತರು ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು ಮತ್ತು ಇತರ ಹಿರಿಯ ನಾಯಕರಲ್ಲಿ ತಮ್ಮ ಪತ್ನಿ ಮತ್ತು ಮಗುವಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆಂದು ಹೇಳಲಾದ Whatsapp ಸಂದೇಶದ ಪ್ರತಿಯನ್ನು ನಿಮ್ಮ ಪರಿಗಣನೆಗಾಗಿ ಇಲ್ಲಿ ಲಗತ್ತಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು!

ವಾಟ್ಸಾಪ್ ಸಂದೇಶದ ಮಾಹಿತಿ ಆಧಾರ,

ದಿನಾಂಕ: 11-3-2022 ರಂದು ಮೃತರು ಮಾನ್ಯ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದ ಪತ್ರದ ಪ್ರಕಾರ, ಶ್ರೀ.ಕೆ.ಎಸ್. ರವರ ಮೌಖಿಕ ಸೂಚನೆಯ ಮೇರೆಗೆ ಅಂದರೆ ಸಚಿವರಿಂದಾಗಲೀ ಅಥವಾ ಸಂಬಂಧಿತ ಅಧಿಕಾರಿಗಳಿಂದ ಕೆಲಸದ ಆದೇಶ ಪ್ರತಿ ಪಡೆಯದೆ ಬೆಳಗಾವಿ ಜಿಲ್ಲೆಯಲ್ಲಿ 12-02-2021 ಹಾಗೂ ಇದಕ್ಕೂ ಮೊದಲು ರೂ.4 ಕೋಟಿಗೂ ಹೆಚ್ಚು ಮೌಲ್ಯದ 108 ಸರ್ಕಾರಿ ಗುತ್ತಿಗೆ ಕಾಮಗಾರಿಗಳನ್ನು ಮಾಡಿದ್ದಾರೆ. ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿದ ನಂತರವೂ ಅವರಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸದ ಆದೇಶವಾಗಲೀ ಅಥವಾ ಕಾಮಗಾರಿಗಳಿಗೆ ಅನುದಾನ ಪಾವತಿಯಾಗಿಲ್ಲ.

ಹಣ ಬಿಡುಗಡೆ ಮತ್ತು ಕೆಲಸದ ಆದೇಶಕ್ಕಾಗಿ ಗುತ್ತಿಗೆದಾರರು ಮಾನ್ಯ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಮೊದಲು ಕಮಿಷನ್ ಪಾವತಿಸಬೇಕು ನಂತರ ಮಾತ್ರ ಕೆಲಸದ ಆದೇಶ ಮತ್ತು ಹಣ ಬಿಡುಗಡೆ ಮಾಡಲಾಗುವುದು ಎಂದು ಅವರಿಂದ ಕಮಿಷನ್ ಗಾಗಿ ಒತ್ತಾಯಿಸುತ್ತಿದ್ದರು.

ಸದರಿ 108 ಕಾಮಗಾರಿಗಳನ್ನು ಕೈಗೊಳ್ಳಲು ಖಾಸಗಿ ಲೇವಾದೇವಿದಾರರಿಂದ ಅಧಿಕ ಬಡ್ಡಿಗೆ ಸಾಲ ಪಡೆದಿದ್ದರು. ಕಾಮಗಾರಿ ಪೂರ್ಣಗೊಂಡ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ ಹಣ ಬಿಡುಗಡೆಗೊಳಿಸಿ ಕೊಡುವುದಾಗಿ ಶ್ರೀ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದರು. ಆದರೆ ಈ ಕಾಮಗಾರಿಗಳು ಪೂರ್ಣಗೊಂಡ ನಂತರವೂ ಅವರ ನೈಜ ಮನವಿಗೆ ಸಚಿವರಾಗಲಿ ಅಥವಾ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ.

KGF 2 ಹವಾ: 20 ಕೋಟಿ ದಾಟಿದ ಮುಂಗಡ ಬುಕ್ಕಿಂಗ್‌ ಮೊತ್ತ!

ಬೇರೆ ದಾರಿಯಿಲ್ಲದೆ, ಅವರು 11-3-2022 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಮತ್ತು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಅವರಿಗೆ ಪತ್ರಗಳನ್ನು ಬರೆದು ತಮ್ಮ ಕರುಣಾಜನಕ ಸ್ಥಿತಿಯನ್ನು ವಿವರಿಸಿದರು. ಕರ್ನಾಟಕ ರಾಜ್ಯ ಆರ್‌ಡಿಪಿಆರ್ ಸಚಿವರಿಗೆ ಅಥವಾ ಕರ್ನಾಟಕ ಸರ್ಕಾರ ಆರ್‌ಡಿಪಿಆರ್‌ನ ಪ್ರಧಾನ ಕಾರ್ಯದರ್ಶಿಗೆ ಬಿಲ್ ಅನ್ನು ಬಿಡುಗಡೆ ಮಾಡಲು ಮತ್ತು ತಕ್ಷಣವೇ ಕೆಲಸದ ಆದೇಶಗಳನ್ನು ನೀಡುವಂತೆ ನಿರ್ದೇಶಿಸಿ, ಇಲ್ಲದಿದ್ದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. 11-3-2022 ರಂದು ತಿಳಿಸಲಾದ ಪತ್ರದ ಪ್ರತಿಯನ್ನು ನಿಮ್ಮ ಪರಿಗಣನೆಗಾಗಿ ಇಲ್ಲಿ ಲಗತ್ತಿಸಲಾಗಿದೆ.

ಈ ಪತ್ರದ ಹೊರತಾಗಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರಾದ ಶ್ರೀ ಅರುಣ್ ಸಿಂಗ್ ಮತ್ತು ಶ್ರೀ ಬಿ.ಎಲ್. ಸಂತೋಷ್ ಅವರನ್ನು ಸಹಾಯಕ್ಕಾಗಿ ಸಂಪರ್ಕಿಸಿದ್ದರು. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನು ಇಂಗ್ಲಿಷ್ ಡೈಲಿ ಮತ್ತು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದೆ. ಟೈಮ್ಸ್ ಆಫ್ ಇಂಡಿಯಾದ ಕ್ಲಿಪ್ಪಿಂಗ್‌ಗಳನ್ನು ನಿಮ್ಮ ಪರಿಗಣನೆಗಾಗಿ ಇಲ್ಲಿ ಲಗತ್ತಿಸಲಾಗಿದೆ.

ಧ್ರುವಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ ರಿಲೀಸ್ ಡೇಟ್ ಫಿಕ್ಸ್!

11-3-2022 ರಂದು ಸದರಿ ವ್ಯಕ್ತಿಯು ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರಗಳನ್ನು ಬರೆದಿದ್ದರೂ ಮತ್ತು ಬಿಜೆಪಿ ನಾಯಕರ ಭರವಸೆಗಳ ಹೊರತಾಗಿಯೂ ಅವರಿಗೆ ಯಾವುದೇ ಕಾಮಗಾರಿ ಬಿಲ್ ಅನ್ನು ಪಾವತಿ ಮಾಡಲಾಗಿಲ್ಲ. ಅವರು ಸಾಲದ ರೂಪದಲ್ಲಿ ಪಡೆದ ಹಣದ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವ ಸ್ಥಿತಿಯಲ್ಲಿರಲಿಲ್ಲ.

ಈ ನಿಟ್ಟಿನಲ್ಲಿ ಸಾಕಷ್ಟು ಒತ್ತಡಗಳಿಂದಾಗಿ ಅವರು ಮತ್ತು ಅವರ ಸ್ನೇಹಿತರು ಉಡುಪಿಗೆ ಹೋಗಿ ಶಾಂಭವಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ದುರಂತ ಸಾವಿಗೆ ಕೆ.ಎಸ್. ಈಶ್ವರಪ್ಪ ಅವರೇ ನೇರ ಹೊಣೆಯಾಗಿದ್ದು, ಅವರಿಗೆ ಶಿಕ್ಷೆಯಾಗಬೇಕು. ಈ ವಾಟ್ಸಾಪ್ ಸಂದೇಶವು ಕಾನೂನಿನ ನಿಬಂಧನೆಗಳ ಪ್ರಕಾರ ಸತ್ತವರ ಡೆತ್ ನೋಟ್ ಹೊರತು ಬೇರೇನೂ ಅಲ್ಲ.

ಇಥಿಯೋಪಿಯಾ – ಬೆಂಗಳೂರು ನಡುವೆ ವಿಮಾನ ಸೇವೆ ಪುನರಾರಂಭ: ಎರಡು ವರ್ಷಗಳ ನಂತರ ಮತ್ತೆ ವೈಭವದ ಚಾಲನೆ

 

ಮೇಲೆ ಹೇಳಿದ ಡೆತ್ ನೋಟ್ ಪ್ರಕಾರ, ಶ್ರೀ ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಹಚರರು ಎಸಗಿದ ನಿರಂತರ ಕಿರುಕುಳ ಮತ್ತು ಕ್ರೌರ್ಯವು ಆತ್ಮಹತ್ಯೆಗೆ ಪ್ರಚೋದನೆಯಾಗಿದೆ.ಒಬ್ಬ ವ್ಯಕ್ತಿಯ ಜೀವನವು ಅಮೂಲ್ಯವಾದುದು. ಅದಕ್ಕಾಗಿಯೇ ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಯಾವುದೇ ರೀತಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ಅತಿಕ್ರಮಣವನ್ನು ತಡೆಗಟ್ಟಲು ಬದುಕುವ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಕಲ್ಪಿಸಲಾಗಿದೆ ಮತ್ತು ಒಬ್ಬ ವ್ಯಕ್ತಿಗೆ ಅಗತ್ಯವಾದ ಎಲ್ಲಾ ಮಾನವ ಹಕ್ಕುಗಳನ್ನು ನೀಡಲಾಗಿದೆ. ಅನುಚ್ಛೇದ-21 ರಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಮಾನವ ಹಕ್ಕುಗಳನ್ನು ಸಂರಕ್ಷಿಸಲು ಸಾಂವಿಧಾನಿಕ ಆಜ್ಞೆಯಾಗಿದೆ; ಮೃತ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಈ ಕಾನೂನನ್ನು ಉಲ್ಲಂಘಿಸಿದ್ದಾರೆ.

ದೇಶದ ಹಿತಾಸಕ್ತಿ ಕಾಪಾಡಲು ನಾನು ಚೌಕಿದಾರ್ ಮತ್ತು ‘ನಾ ಖಾವೂಂಗಾ, ನಾ ಖಾನೆ ದುಂಗಾ’ (ನಾನು ತಿನ್ನುವುದಿಲ್ಲ ಮತ್ತು ಇತರರಿಗೆ ಲಂಚ ತಿನ್ನಲು ಬಿಡುವುದಿಲ್ಲ) ಎಂದು ಹೇಳಿಕೊಳ್ಳುತ್ತಿರುವ ಮಾನ್ಯ ಪ್ರಧಾನ ಮಂತ್ರಿಗಳು ಮತ್ತು ಸಂಬಂಧಪಟ್ಟವರು, ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರು ಮೃತ ವ್ಯಕ್ತಿಗೆ ಪರಿಹಾರ ನೀಡಲು ವಿಫಲರಾಗಿದ್ದಾರೆ ಹಾಗೂ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಈ ಘಟನೆಯು ಕರ್ನಾಟಕದ ಭ್ರಷ್ಟಾಚಾರವು ಹದ್ದು ಮೀರಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ ಕೃಷ್ಣರಾಜೇಂದ್ರ ಎಂಜಿನಿಯರಿಂಗ್ ಕಾಲೇಜು ಅಭಿವೃದ್ಧಿಗೆ ಐಬಿಎಂ ಆಸಕ್ತಿ

 

ಶ್ರೀ ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಂಗಡಿಗರನ್ನು ಅತಿಯಾಗಿ ನಂಬಿ 4 ಕೋಟಿ ರೂ.ಗಳ ಅಂದಾಜು 108ಕ್ಕೂ ಹೆಚ್ಚು ಕಾಮಗಾರಿಗಳನ್ನು ಅಧಿಕಾರಿಗಳಿಂದ ಕಾಮಗಾರಿ ಆದೇಶವಿಲ್ಲದೆ ನಿರ್ವಹಿಸಿದ ಅಮಾಯಕನೊಬ್ಬ ವಿಷಮ ಪರಿಸ್ಥಿತಿಗೆ ಬಲಿಯಾಗಿದ್ದಾನೆ. ಕೆ.ಎಸ್.ಈಶ್ವರಪ್ಪ ಮತ್ತು ಅವರ ಮಿತ್ರರು ಸಂತೋಷ್ ಕೆ.ಪಾಟೀಲ್ ಅವರ ಆತ್ಮಹತ್ಯೆಗೆ ಪ್ರಮುಖ ಕಾರಣರಾಗಿದ್ದಾರೆ. ಇದು ಐಪಿಸಿಯ ಸೆಕ್ಷನ್ -306 ರ ನಿಬಂಧನೆಗಳ ಪ್ರಕಾರ ಮತ್ತು ಭ್ರಷ್ಟಾಚಾರ ತಡೆ ಕಾಯಿದೆಯ ಸೆಕ್ಷನ್ -13 ರ ನಿಬಂಧನೆಗಳ ಅಡಿಯಲ್ಲಿ ಮರಣದಂಡನೆ ವಿಧಿಸಬಹುದಾದ ಅಪರಾಧವಾಗಿದೆ. ಮಾಡಿದ ಕೆಲಸಗಳ ಹಣ ಬಿಡುಗಡೆಗೆ ಕಮಿಷನ್ ಕೇಳುವುದು ಶಿಕ್ಷಾರ್ಹ ಅಪರಾಧವಲ್ಲದೆ ಬೇರೇನೂ ಅಲ್ಲ.

ಮೇಲೆ ಹೇಳಿದ ಸಂಗತಿಗಳು ಮತ್ತು ಸಂದರ್ಭಗಳ ದೃಷ್ಟಿಯಿಂದ, ನಾವು ನಿಮ್ಮ ಗೌರವಾನ್ವಿತ ಕಚೇರಿಗೆ ನಮ್ರತೆಯಿಂದ ಮನವಿ ಮಾಡಿದ್ದೇವೆ;

(1) ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಮಂತ್ರಿಮಂಡಲದಿಂದ ಶ್ರೀ.ಕೆ.ಎಸ್.ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು,

(2) ಕೆ.ಎಸ್.ಈಶ್ವರಪ್ಪ ಮತ್ತು ಅವರ ಮಿತ್ರರ ಕುಮ್ಮಕ್ಕಿನಿಂದ ಸಂತೋಷ್ ಕೆ.ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾದ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು,

(3) IPC ಯ ಸೆಕ್ಷನ್-306 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್-13 ಮತ್ತು ಕಾನೂನಿನ ಇತರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಕ್ರಿಮಿನಲ್ ಮೊಕದ್ದಮೆಯನ್ನು ತಕ್ಷಣವೇ ದಾಖಲಿಸಬೇಕು.

(4) ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು.

 

ಧನ್ಯವಾದಗಳು,
ನಿಮ್ಮ ವಿಶ್ವಾಸಿ,

ಡಿ.ಕೆ.ಶಿವ ಕುಮಾರ್
ಅಧ್ಯಕ್ಷರು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

ಸಿದ್ದರಾಮಯ್ಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರು.

ಬಿ.ಕೆ. ಹರಿಪ್ರಸಾದ್
ವಿರೋಧ ಪಕ್ಷದ ನಾಯಕರು
ಕರ್ನಾಟಕ ವಿಧಾನ ಪರಿಷತ್ತು.

              ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap