ಬೆಂಗಳೂರು :
ಬೆಂಗಳೂರಿನಲ್ಲಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗಜ್ಞಾನೇಂದ್ರ ಸ್ಪೋಟಕ ಮಾಹಿತಿ ನೀಡಿದ ಬೆನ್ನಲ್ಲೇ ಅರಗ ಜ್ಞಾನೇಂದ್ರ ಯೂಟರ್ನ್ ಹೊಡೆದಿದ್ದಾರೆ. ಏನು ಅನ್ನೋದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ
ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ!
ಬೆಂಗಳೂರಿನ ಜೆ.ಜೆ.ನಗರದಲ್ಲಿ ದಲಿತ ಯುವಕ ಚಂದ್ರುವನ್ನು ನಾಲ್ವರು ಕೊಲೆ ಮಾಡಿದ್ದಾರೆ.ಚಂದ್ರು ಉರ್ದು ಮಾತನಾಡಿಲ್ಲ ಎಂದು ಕೊಲೆ ಮಾಡಲಾಗಿದೆ. ಎಂದು ಮೊದಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು ಬಳಿಕ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ಪಡೆದ ಬಳಿಕ ಅದೇ ಹಾದಿಯಲ್ಲಿ ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದೆ ಎಂದು ಮತ್ತೊಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದಾರೆ.
ಸಣ್ಣ ಅಪಘಾತವೇ ಚಂದ್ರೂ ಕೊಲೆ ಕಾರಣವಾಗಿದೆ. ಯಾರದ್ದೇ ಕೊಲೆಯಾದ್ರೂ ನಾನು ಖಂಡಿಸುತ್ತೇನೆ ಹಿಂದೂ ಆದರೂ ಜೀವ , ಮುಸ್ಲಿಂ ಆದರೂ ಜೀವವೇ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದೆ ಎಂದು ಇದೀಗ ಸ್ಪಷ್ಟನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
