ಮಧುಗಿರಿ :
ತಾಲ್ಲೂಕು ಕನ್ನಡ ಜಾಗೃತಿ ವೇದಿಕೆಯ ವತಿಯಿಂದ ನಾಡಧ್ವಜ ಕನ್ನಡ ಬಾವುಟವನ್ನು ಸುಟ್ಟ ಹಾಕಿರುವ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿ ವೈ ರವಿ ರವರಿಗೆ ಮನವಿ ಪತ್ರ ನೀಡಲಾಯಿತು.
ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂ.ಇ.ಎಸ್ ಮತ್ತು ಶಿವಸೇನೆಯ ಪುಂಡರು ನಾಡಧ್ವಜ ಕನ್ನಡ ಬಾವುಟವನ್ನು ಸುಟ್ಟಿರುತ್ತಾರೆ, ಇಂತಹ ಕಿಡಿಗೇಡಿಗಳ ಮೇಲೆ ರಾಜ್ಯ ಸರಕಾರ ಕಾನೂನು ಕ್ರಮಕೈಗೊಂಡು ಘಟನೆಗೆ ಕಾರಣರಾದ ಶಿವಸೇನೆ ಮತ್ತು ಎಂ.ಇ.ಎಸ್ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ಉಪಾಧ್ಯಕ್ಷ. ಪ್ರಸಾದ್, ಸಂಘಟನೆ ಕಾರ್ಯದರ್ಶಿ. ಶಿವಲಿಂಗಯ್ಯ, ಕನ್ನಡ ಜಾಗೃತಿ ವೇದಿಕೆ ಮಹಿಳಾ ಘಟಕ ಅಧ್ಯಕ್ಷ ರಾಮಾಂಜಿನಮ್ಮ, ನಗರಾಧ್ಯಕ್ಷೆ ರತ್ನಮ್ಮ, ಐಡಿಹಳ್ಳಿ ಬಾಲು, ರಾಜು ರೋಹಿತ್, ಮಹೇಶ್, ಇಲಿಯಸ್, ಪ್ರಭು ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
