ಗುಬ್ಬಿ:
ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಲು ಅವಕಾಶ ಮಾಡಿಕೊಟ್ಟ ನಿಟ್ಟಿನಲ್ಲಿ ಸದಸ್ಯರು ಬುಧವಾರ ಗುಬ್ಬಿ ನ್ಯಾಯಾಲಯಕ್ಕೆ ಭೇಟಿ ನೀಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರಾದ ನಿರಂಜನ್ ಅವರು ಮಹಿಳೆಯರಿಗೆ ಕಾನೂನು ಹಾಗೂ ನ್ಯಾಯಾಲಯದ ಕಲಾಪಗಳ ಬಗ್ಗೆ ಅರಿವು ಮೂಡಿಸುವುದರಿಂದ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಲು ಸಾಧ್ಯವಾಗುತ್ತದೆ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸ್ವಯಂ ಪ್ರೇರಿತವಾಗಿ ಕಾನೂನು ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಅಗತ್ಯವಿರುವ ಸಹಕಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ನಾವುಗಳು ನ್ಯಾಯಾಲಯಕ್ಕೆ ಭೇಟಿ ನೀಡಿದ್ದರಿಂದ ನ್ಯಾಯಾಲಯ ಹಾಗೂ ಕಾನೂನುಗಳ ಬಗ್ಗೆ ಗೌರವ ಹೆಚ್ಚಿದ್ದು, ಯಾವುದೇ ಅನ್ಯಾಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿದೆ ಎನ್ನುವುದನ್ನು ಮನಗಂಡಿದ್ದೇವೆ ಎಂದು ಮಹಿಳಾ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪೋಲೀಸ್ ಎಎಸ್ಐ ಕುಮಾರಸ್ವಾಮಿ, ಪೆÇಲೀಸ್ ಸಿಬ್ಬಂದಿಗಳಾದ ಕವಿತಾ, ರೇಣುಕಪ್ಪ, ವಕೀಲರಾದ ಮೋಹನ್, ಜ್ಞಾನವಿಕಾಸ ಕೇಂದ್ರದ ಸದಸ್ಯರು, ವಕೀಲರು ಉಪಸ್ಥಿತರಿದ್ದರು.
ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನ್ಯಾಯಾಲಯದ ಕಲಾಪ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ನಮ್ಮ ಸಂಘದ ಸದಸ್ಯರು ನ್ಯಾಯಾಲಯದ ಪ್ರಕಿಯೆ ವಿಚಾರ ತಿಳಿದುಕೊಂಡು ಗ್ರಾಮೀಣ ಭಾಗಗಳಲ್ಲಿ ಕಾನೂನುಗಳ ಮಹತ್ವವನ್ನು ತಿಳಿಸಲು ಸಾಧ್ಯವಾಗುತ್ತದೆ.
-ಪ್ರೇಮ, ಮುಖ್ಯಸ್ಥರು, ಜ್ಞಾನವಿಕಾಸ ಕೇಂದ್ರ
ದೌರ್ಜನ್ಯ ತಡೆಗೆ ಕಾನೂನು ಅವಶ್ಯ :
ಸರ್ಕಾರಿ ವಕೀಲರಾದ ಅಕ್ಷತಾ ಮಾತನಾಡಿ, ಮಹಿಳೆಯರು ಸಬಲೀಕರಣಗೊಳ್ಳಲು ಸಾಕಷ್ಟು ಕಾನೂನುಗಳು ಜಾರಿಯಲ್ಲಿವೆ. ಇವುಗಳನ್ನು ವ್ಯವಸ್ಥಿತವಾಗಿ ಬಳಸಿಕೊಂಡು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲಬೇಕಾಗಿದೆ. ಯಾವುದೇ ಮಹಿಳೆ ಕಾನೂನಿನ ನೆರವು ಬೇಕಾದಲ್ಲಿ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ನ್ಯಾಯಾಲಯದಿಂದ ಸಾಧ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
