ಶಿವಮೊಗ್ಗ: ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್

ಶಿವಮೊಗ್ಗ

      ಭಾರಿ ಮಳೆಗೆ ಮಣ್ಣು ಕುಸಿತವಾದ ಕಾರಣ ಶಿವಮೊಗ್ಗ  ಜಿಲ್ಲೆ ಹೊಸನಗರ ತಾಲೂಕಿನ ಬಾಳೆಬರೆ ಘಾಟ್​​ನಲ್ಲಿ  ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಭಾರಿ ವಾಹಮಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಅವರು ಸೂಚನೆ ನೀಡಿದ್ದಾರೆ. ಪರ್ಯಾಯ ಮಾರ್ಗಗಳ ವಿವರವನ್ನೂ ಆದೇಶದಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳಬರೆ ಘಾಟ್ 42.10 ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯ ಕೈಗೊಳ್ಳಲಾಗಿದೆ.

    ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

   ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲು ಲೋಕೋಪಯೋಗಿ ಇಲಾಖೆಯ ಶಿವಮೊಗ್ಗ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿರುತ್ತಾರೆ. ಅದರಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

   ಪ್ರಸ್ತಾವನೆಯಂತೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಮತ್ತು ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರ ಉಲ್ಲೇಖ (2) (3) (4) ವರದಿಗಳನ್ವಯ, SH-52 ರ ಬಾಳೆಬರೆ ಘಾಟ್ ನಲ್ಲಿ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರ ನಿಷೇದ ಮಾಡಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬಹುದಾಗಿ ವರದಿ ಸಲ್ಲಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶಲ್ಲಿ ಉಲ್ಲೇಖಿಸಿದ್ದಾರೆ. 

  • ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ-52 ರಸ್ತೆಯ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ-ರಾವ ಕಾನುಗೋಡು ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ರಾಹ-52) ಮಾರ್ಗಕ್ಕೆ ಬದಲಾಗಿ ತೀರ್ಥಹಳ್ಳಿ-ರಾವ-ಕಾನುಗೋಡು-ನಗರ ಕೊಲ್ಲೂರು -ಕುಂದಾಪುರ ರಸ್ತೆಯಾಗಿ ಸಂಚರಿಸುವುದು.
  • ನಗರ ಸಿದ್ದಾಪುರ ರಾಜ್ಯ ಹೆದ್ದಾರಿ-278 ರಸ್ತೆ, ತೀರ್ಥಹಳ್ಳಿಯಿಂದ ಯಡೂರು ಹುಲಿಕಲ್, ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ ಯಡೂರು- ಸುಳಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್- ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ಸೇರುವ ರಸ್ತೆ) ತೀರ್ಥಹಳ್ಳಿ ಯಡೂರು- ಮಾಸ್ತಿಕಟ್ಟೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ಮಾರ್ಗವಾಗಿ ಸಂಚರಿಸುವು.
  • ಶಿವಮೊಗ್ಗ/ ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ಶಿವಮೊಗ್ಗ-ಸಾಗರ ಕಡೆಯಿಂದ ಹೊಸನಗರ- ನಗರ- ಮಾಸ್ತಿಕಟ್ಟೆ- ಹುಲಿಕಲ್ ಘಾಟ್- ಹೊಸಂಗಡಿ- ಸಿದ್ದಾಪುರ- ಮೂಲಕ ಕುಂದಾಪುರ ಸೇರುವ ರಸ್ತೆ) ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರ ದಿಂದ-ಭಟ್ಕಳ-ಬೈಂದೂರು-ಕುಂದಾಪುರ ರಸ್ತೆ ಮೂಲಕ ತೆರಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Recent Articles

spot_img

Related Stories

Share via
Copy link