ಬೆಂಗಳೂರು :
ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ, ತಂಪಾದ ವಾತಾವರಣದ ಧೂಳು ಕೂಡ ಸೇರ್ಪಡೆಗೊಂಡಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ.
ನಗರದಲ್ಲಿ ಹಲವು ರಸ್ತೆಗಳು ಹದಗೆಟ್ಟ ಪರಿಣಾಮ ವಾಹನಗಳು ಓಡಾಡುವಾಗ ಧೂಳಿನಿಂದ ಜನರ ಓಡಾಟಕ್ಕೆ ಸಂಕಷ್ಟ ಎದುರಾಗಿದ್ದರೆ, ಅತ್ತ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಗರಿಷ್ಟ ಮಟ್ಟಕ್ಕೆ ತಲುಪಿದ್ದು, ಹೆಲ್ತ್ ಎಮರ್ಜೆನ್ಸಿ ಶುರುವಾದಂತಿದೆ. ಈ ಆತಂಕ ಇದೀಗ ಬೆಂಗಳೂರಿಗೂ ಕಾಡುತ್ತಿದೆ. ನಗರದ ಹಲವೆಡೆ ಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಬಸವನಗುಡಿಯ ಎನ್ ಆರ್ ಕಾಲೊನಿ ಮುಖ್ಯ ರಸ್ತೆಯಲ್ಲಂತೂ ವಿಪರೀತ ಧೂಳಿಗೆ ವಾಹನ ಸವಾರರು ನಿತ್ಯ ನರಕ ಅನುಭವಿಸ್ತಿದ್ದಾರೆ.
ಪೈಪ್ಲೈನ್ ಕಾಮಗಾರಿಯೊಂದಕ್ಕೆ ರಸ್ತೆ ಅಗೆಯಲಾಗಿತ್ತು. ಕೆಲಸ ಮುಗಿದ ಬಳಿಕ ರಸ್ತೆ ಮಾಡದೇ ಹಾಗೆ ಬಿಟ್ಟ ಪರಿಣಾಮ ಧೂಳು ಬರ್ತಿದೆ. ರಸ್ತೆಯ ಅಕ್ಕಪಕ್ಕದ ವ್ಯಾಪಾರಸ್ಥರು ವ್ಯಾಪಾರಸ್ಥರು ವ್ಯಾಪಾರ ಮಾಡದಂತಹ ಪರಸ್ಥಿತಿ ಇದ್ರೆ. ಬೈಕ್ ನಲ್ಲಿ ಹೋಗುವವರು, ಫುಟ್ ಪಾತ್ ಮೇಲೆ ಓಡಾಡೋರು ಕೂಡ ಸಮಸ್ಯೆ ಅನುಭವಿಸಬೇಕಾಗಿದೆ.
ಇನ್ನೂ ಶ್ವಾಸಕೋಶ ಹಾಗೂ ಉಸಿರಾಟ ತೊಂದರೆ, ಹೃದ್ರೋಗಿಗಳು, ಮಕ್ಕಳು ಮತ್ತು ಹಿರಿಯ ವಯಸ್ಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಒಟ್ಟಿನಲ್ಲಿ ತಂಪು ವಾತಾವರಣ ಜೊತೆ ನಗರದಲ್ಲಿ ವಾಹನಗಳ ಹೊಗೆ, ರಸ್ತೆಯಿಂದ ಬರುವ ಧೂಳಿನಿಂದ ವಾಯು ಮಾಲಿನ್ಯ ಹೆಚ್ಚಾಗಿದ್ದು, ಉಸಿರಾಟ ಜೊತೆಗೆ ಧೂಳು ಮನುಷ್ಯನ ರಕ್ತ ನಾಳಗಳಿಗೆ ಸೇರುವ ಮೂಲಕ ಶ್ವಾಸಕೋಶ ಮತ್ತು ಹೃದಯ ಕಾಯಿಲೆಗಳು, ಪಾರ್ಶ್ವವಾಯು ಹಾಗೂ ಕ್ಯಾನ್ಸರ್ ನಂತಹ ಖಾಯಿಲೆಗೆ ಕಾರಣವಾಗಲಿದೆ.
ನಗರದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವ್ದೇ ಕ್ರಮಗಳು ಆಗ್ತಿಲ್ಲ. ಹೀಗೆ ಬೆಂಗಳೂರಿನ ಮಾಲಿನ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ದೆಹಲಿಯ ಪರಿಸ್ಥಿತಿ ಬೆಂಗಳೂರಿಗೂ ಬರೋಕೆ ಹೆಚ್ಚು ಸಮಯ ಬೇಕಿಲ್ಲ. ಹೀಗಾಗಿ ಸಿಲಿಕಾನ್ ಮಂದಿ ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸೂದು ಸೂಕ್ತ.
