ಲೋಕ ಸಭಾ ಚುನಾವಣೆ : ಮಾತಾನಾಡುವಾಗ ಎಚ್ಚರ ವಹಿಸಿ ನಾಯಕರಿಗೆ ಆಯೋಗ ಕಿವಿಮಾತು

ನವದೆಹಲಿ:

     ಪ್ರಧಾನಿ ನರೇಂದ್ರ ಮೋದಿ ಕುರಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.

    ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ಭಾಷಣದ ತಯಾರಿಯಲ್ಲಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಹುಮ್ಮಸ್ಸಿನಲ್ಲಿದ್ದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

      ಪನೌತಿ, ಪಿಕ್​ ಪಾಕೆಟ್​ ಎಂಬ ಪದಗಳ ಬಳಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕಾಂಗ್ರೆಸ್​ ನಾಯಕನನ್ನು ಎಚ್ಚರಿಸಿದೆ. ಈ ಹಿಂದೆ ಪ್ರಧಾನಿ ಮೋದಿ ವಿರುದ್ಧ ಮಾತನಾಡುವಾಗ ಬಳಸಿದ ಪದಗಳ ಸಂಬಂಧ ಕೇಂದ್ರ ಚುನಾವಣಾ ಆಯೋಗ​ ವಾರ್ನಿಂಗ್​ ನೀಡಿದ್ದು, ಮೋದಿ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ಎಂದು ರಾಹುಲ್​ ಗಾಂಧಿಗೆ ತಾಕೀತು ಮಾಡಿದೆ.

ಮುಂಬರುವ ಚುನಾವಣೆ ಪ್ರಚಾರ ಕಾರ್ಯದಲ್ಲೂ ತಮ್ಮ ಸೂಚನೆಯನ್ನು ಪಾಲಿಸಬೇಕು ಎಂದು ರಾಹುಲ್​ ಗಾಂಧಿಗೆ ಕಮಿಷನ್​ ಆದೇಶಿಸಿದೆ. ಚುನಾವಣಾ ಆಯೋಗವು ಮಾರ್ಚ್ 1 ರಂದು ಹೊರಡಿಸಿರುವ ತನ್ನ ಆದೇಶದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಈ ಹಿಂದೆ ನೊಟೀಸ್ ಪಡೆದಿರುವ ಪಕ್ಷದ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಪುನರಾವರ್ತಿತವಾಗಿ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap