ನೀತಿ ಸಂಹಿತೆ :ರದ್ದಾದ ಭಾರತ್‌ ಗೌರವ್‌ ರೈಲು ….!

ಬೆಂಗಳೂರು 

     ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣೆ ಆಯೋಗ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಿದೆ. 2023ರ ಏಪ್ರಿಲ್‌ನಲ್ಲಿ ಯಾತ್ರಾರ್ಥಿಗಳಿಗಾಗಿ ಬೆಂಗಳೂರು ಮತ್ತು ವಾರಣಾಸಿ ನಡುವೆ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದ ರಾಜ್ಯ ಸರ್ಕಾರದ ಉತ್ಸಾಹಕ್ಕೆ ಬ್ರೇಕ್ ಹಾಕಿದೆ.

     ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗ ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದುಗೊಳಿಸಿದೆ. ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲೇಖಿಸಿ ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ಸರ್ಕಾರದಿಂದ ಕಾಶಿ ದರ್ಶನ ವಿಶೇಷ ರೈಲು ಸಂಚಾರವನ್ನು ರದ್ದುಗೊಳಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
     ನೀತಿ ಸಂಹಿತೆ ಪ್ರಕಾರ, ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ, ಹೊಸ ಕಾರ್ಯಕ್ರಮಗಳ ಅನುಷ್ಠಾನ ಮಾಡುವಂತಿಲ್ಲ, ಹೊಸ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡುವಂತಿಲ್ಲ, ಹೊಸ ಯೋಜನೆಗೆ ಹಣ ಕೂಡ ನೀಡುವಂತಿಲ್ಲ. ಹೀಗಾಗಿ ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲು ರಾಜ್ಯ ಸರ್ಕಾರದ ಯೋಜನೆಯಾಗಿರುವುದರಿಂದ ಇದನ್ನು ರದ್ದುಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link