ಬೆಂಗಳೂರು :
ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ದಿನದಿಂದ ದಿನಕ್ಕೆ ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ
ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ಟೊಮೆಟೊ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ಟೊಮೆಟೊ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ.ಅಗತ್ಯದಷ್ಟು ಟೊಮೆಟೊ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್
ರಾಜ್ಯದ ಪ್ರಮುಖ ಟೊಮೆಟೊ ಮಾರುಕಟ್ಟೆಗಳಲ್ಲಿ ಒಂದಾದ ಕೋಲಾರ ಮಾರುಕಟ್ಟೆಯಲ್ಲಿ ಶುಕ್ರವಾರ 15 ಕೆಜಿ ಟೊಮೆಟೊ ಬಾಕ್ಸ್ 1080 ರೂ.ಗೆ ಮಾರಾಟವಾಗಿದೆ. ಚಿಲ್ಲರೆ ಕೆಜಿಗೆ 100 ರೂ. ಗಡಿದಾಟಿದೆ. ಕಳೆದ ತಿಂಗಳು ಬೆಲೆ ಇಳಿಕೆಯಾಗಿದ್ದ ಟೊಮೇಟೊ ಬೆಲೆಯಲ್ಲಿ ಇದೀಗ ಭಾರೀ ಏರಿಕೆಯಾಗಿದ್ದು, ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿದೆ, ಹೊರರಾಜ್ಯದ ವ್ಯಾಪಾರಿಗಳು ಬಾರದ ಕಾರಣ ಬೆಲೆ ಕುಸಿತವಾಗಿತ್ತು. ಈಗ ಬೆಳೆ ಕಡಿಮೆ ಇರುವುದರಿಂದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/05/xshutterstock-104034200-04-1499170464-jpg-pagespeed-ic-nizkerzgx6-14-1500016835.jpg)