ಬೆಂಗಳೂರು:
ವಿರೋಧಪಕ್ಷ ನಾಯಕ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಮುಂದೆ ಕಾಂಗ್ರೆಸ್ನ ಕಾರ್ಯಕರ್ತರು ಹಠಾತ್ತನೆ ಪ್ರತಿಭಟನೆ ಮಾಡಿದರು. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರ ನಿವಾಸಲ್ಲಿದ್ದ ಬಿಜೆಪಿಯ ಶಾಸಕರಾದ ರೇಣುಕಾಚಾರ್ಯ, ವಿಶ್ವನಾಥ, ರವಿಕುಮಾರ್ ಹಾಗೂ ಇನ್ನು ಕೆಲವರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದರು. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಹಾಗೂ ಕಾಂಗ್ರೆಸ್ ನಡುವೆ ನೂಕಾಟ-ತಳ್ಳಾಟ ಸಹ ನಡೆಯಿತು.
ಶಾಸಕ ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್ ಗೂಂಡಾಗಿರಿ ಮುಂದುವರೆದರೆ ನಾವು ಕೈಕಟ್ಟಿ ಕೂರುವುದಿಲ್ಲ ‘ಸ್ನೇಹಕ್ಕೆ ಬದ್ಧ ಸಮರಕ್ಕೆ ಸಿದ್ಧ’ ಎಂದು ಘೋಷಿಸಿದರು.
ಬಿಜೆಪಿ ಶಾಸಕ ವಿಶ್ವನಾಥ ಅವರು ಮಾತನಾಡಿ, ‘ಕುಮಾರಸ್ವಾಮಿ ಅವರು ಮಧ್ಯಾಹ್ನ ನಾನೇ ಧಂಗೆ ಏಳಲು ಕರೆ ನೀಡುತ್ತೇನೆ’ ಎಂದು ಹೇಳಿಕೆ ಕೊಟ್ಟಿರುವ ಬೆನ್ನಲ್ಲೆ ಹೀಗೆ ನಡೆದಿದೆ. ಇದು ಸರ್ಕಾರವೇ ಗೂಂಡಾಗಿರಿ ಮಾಡಲು ಪ್ರೇರೇಪಿಸುತ್ತಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆ ತಾರಕಕ್ಕೇರಿ ಉಭಯ ಪಕ್ಷಗಳ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ವರೆಗೂ ಮಿತಿ ಮೀರಿತು.ಆದರೆ ಈ ವೇಳೆ ಪೊಲೀಸರು ಮಾತ್ರ ಅಸಹಾಯಕರಂತೆ ವರ್ತಿಸಿದರು ಅಂತಾ ಬಿಜೆಪಿ ಮುಖಂಡರು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
