ನವದೆಹಲಿ:
ಎಂಸಿಡಿ ಸದನದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಚುನಾವಣೆ ವಿಚಾರವಾಗಿ ಮತ್ತೆ ಗಲಾಟೆ ನಡೆದಿದೆ. ಫೆ.24ರಂದು ಸ್ಥಾಯಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಶೆಲ್ಲಿ ಒಬೆರಾಯ್ ಒಂದು ಮತವನ್ನು ಅಸಿಂಧು ಎಂದು ಘೋಷಿಸುತ್ತಿದ್ದಂತೆ ಎರಡೂ ಪಕ್ಷಗಳ ಕೌನ್ಸಿಲರ್ ಗಳು ಜಗಳ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ .
ಎಂಸಿಡಿ ಸದನದ ಕಲಾಪವನ್ನು ಫೆ.27ರವರೆಗೂ ಮುಂದೂಡುವಂತೆ ಒತ್ತಾಯಿಸುತ್ತಿದ್ದಾಗ ಕೌನ್ಸಿಲರ್ ಅಶೋಕ್ ಮನು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ ಎಂದು ಭಾವಿಸಿ ಬಿಜೆಪಿ ಕೌನ್ಸಿಲರ್ ಗಳು ದೆಹಲಿ ಮೇಯರ್ ಮೇಲೆ ಹಲ್ಲೆ ನಡೆಸಿದ್ದು.
ಇಂದು ಕರಾಳ ದಿನ. ಸಂವಿಧಾನವನ್ನು ಅಪಹಾಸ್ಯ ಮಾಡಲಾಗಿದೆ. ನಾವು ಬಿಜೆಪಿ ಕೌನ್ಸಿಲರ್ಗಳನ್ನು ಕರೆದು ಅವರ ಬೇಡಿಕೆಗಳ ಬಗ್ಗೆ ಕೇಳಿದ್ದು, ಮರು ಚುನಾವಣೆ ಮಾಡಿದ್ದೇವೆ. ಆದರೆ ಅವರು ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಮೇಯರ್ ಒಬೆರಾಯ್ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ