ಬಡವರ ಅಕ್ಕಿ ಕಸಿದಿದ್ದು ಬಿಜೆಪಿ : ಸಿದ್ದರಾಮಯ್ಯ

ಬೆಂಗಳೂರು

   2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ರಾಜ್ಯದ ಜನತೆಗೆ ಗುರುವಾರ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

   ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಹಾಲು ನೀಡುವ ‘ಕ್ಷೀರ ಭಾಗ್ಯ’ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಡವರಿಗೆ ಅಕ್ಕಿ ನಿರಾಕರಿಸುವ ಮೂಲಕ ಬಿಜೆಪಿ ಹೇಯ ಕೃತ್ಯವೆಸಗಿದೆ. ಕೇಂದ್ರದ ಆಡಳಿತ ಪಕ್ಷ ಕರ್ನಾಟಕದ ಜನತೆಗೆ ಅನ್ನ ನಿರಾಕರಿಸಿದೆ ಎಂದು ಹೇಳಿದರು.

    ‘ತಾವು ರಾಜ್ಯದ ಮುಖ್ಯಮಂತ್ರಿಯಾದಾಗ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಪತ್ರ ಬರೆದಿದ್ದೆವು. ಆರಂಭದಲ್ಲಿ ಅಕ್ಕಿ ನೀಡುವುದಾಗಿ ಎಫ್‌ಸಿಐ ಭರವಸೆ ನೀಡಿತ್ತು, ಆದರೆ ಬಳಿಕ ಮಧ್ಯಪ್ರವೇಶಿಸಿದ್ದ ಕೇಂದ್ರ ಸರ್ಕಾರ ಅಕ್ಕಿ ನಿರಾಕರಿಸಿದೆ. ನಾವು ಅವರನ್ನು ನಂಬಿದ್ದೆವು. ಆದರೆ ಕೇಂದ್ರ ಸರ್ಕಾರವು ನಮಗೆ ಅಕ್ಕಿ ನಿರಾಕರಿಸಿದೆ, ಬಿಜೆಪಿ ಬಡವರ ಪರವಾಗಿದೆಯೇ? ಅವರಲ್ಲ.

    ನಾವು ಉಚಿತವಾಗಿ ಅಕ್ಕಿ ಕೇಳಲಿಲ್ಲ. ನಾವು ಅದನ್ನು ಪಾವತಿಸಲು ಸಿದ್ಧರಿದ್ದೇವೆ. ನಾವು ಕೆಜಿಗೆ 36 ರೂಪಾಯಿ ನೀಡಲು ಸಿದ್ಧರಿದ್ದೇವೆ. ಅಕ್ಕಿಗಾಗಿ ನಾವು ಕೇಳಿದಾಗ ಅವರು ಒಪ್ಪಿದರು ಮತ್ತು ನಂತರ ಹಿಂದೆ ಸರಿದರು, ಅವರು ಎಷ್ಟು ಹೇಯರು ಎಂದು ನೀವೆಲ್ಲರೂ ನಿರ್ಧರಿಸಬೇಕು. ಅವರು ಬಡವರ ವಿರೋಧಿಗಳು. ಅವರ ನಡೆ ಅಮಾನವೀಯರು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap