ಬೆಂಗಳೂರು:
ಮುಂದಿನ ತಲೆಮಾರಿನ ನಾಯಕತ್ವವನ್ನು ಬೆಳೆಸಲು ಬಿಎಸ್ ಯಡಿಯೂರಪ್ಪ, ಈಶ್ವರಪ್ಪ, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದು, ಈ ಮೂಲಕ ದೊಡ್ಡ ಪರಂಪರೆಗೆ ಸಾಕ್ಷಿ ಆಗಿದ್ದಾರೆ. ಈ ಮೂಲಕ ಸಾವಿರಾರು ಕಾರ್ಯಕರ್ತರಿಗೆ ಪ್ರೇರಣೆ ನೀಡಿದ್ದಾರೆಂದು ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ಹೇಳಿದ್ದಾರೆ.
ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ ಆಗಿದ್ದು, ರಾಜ್ಯದಲ್ಲಿ ಹೊಸ ಚೈತನ್ಯದಿಂದ ಕಾರ್ಯಕರ್ತರು ಹಾಗೂ ಮತದಾರರು ಸ್ವಾಗತ ಮಾಡಿದ್ದಾರೆ ಎಂದು ಹೇಳಿದರು.
ಸಾಮಾಜಿಕ ನ್ಯಾಯವನ್ನು ಎಲ್ಲ ಹಂತದಲ್ಲಿ ಪರಿಗಣಿಸಲಾಗಿದೆ. ಎಲ್ಲಾ ಜಾತಿ ಉಪ ಜಾತಿಗಳಿಗೆ ಅವಕಾಶ ಕೊಡಲಾಗಿದೆ. ಸುಳ್ಳದಲ್ಲಿ ಆದಿ ದ್ರಾವಿಡ ಸಮಾಜದ ಮಹಿಳೆಗೆ ಟಿಕೆಟ್ ಕೊಡಲಾಗಿದೆ. ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಸಮಾಜದ ಭಾಗೀರತಿ ಮುರುಳಿಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಎಸ್ ಸಿ ಸಮಾಜದ ಎಲ್ಲ ಉಪ ಜಾತಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/04/Untitled-10.jpg)