ನಾಯಕರಿಲ್ಲದೆ ಬಣಗುಡುತ್ತಿದೆ ರಾಜ್ಯ ಬಿಜೆಪಿ…..!

ಬೆಂಗಳೂರು:

      ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ನವದೆಹಲಿಯಿಂದ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನ ರಾಜ್ಯ ಘಟಕದ ನಾಯಕ ಮತ್ತು ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

    ಈ ಸಭೆಗಳಲ್ಲಿ ಪಕ್ಷದ ಅಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನೇಮಕ ಮಾಡಬೇಕೆಂಬ ಸಲಹೆಗಳು ಬರುತ್ತಿವೆ ಎಂದು ತಿಳಿದುಬಂದಿದೆ. ಇದರೊಂದಿಗೆ ಪಕ್ಷವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ