ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ : ಡಿಕೆಶಿ

ಬೆಂಗಳೂರು : 

   ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳದ ರೀತಿಯಲ್ಲಿ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದ್ದು, ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

   ತಮ್ಮನ್ನು ಹಾಗೂ ಚಿದಂಬರA ಅವರನ್ನು ಬಿಜೆಪಿಯವರು ತಿಹಾರ್ ಜೈಲಿಗೆ ಹಾಕಿದ್ದರು. ಸೋನಿಯಾ ಗಾಂಧಿ ಅವರು ಅಲ್ಲಿಗೆ ಬಂದು ನಮ್ಮನ್ನು ಭೇಟಿ ಮಾಡಿ ನಮಗೆ ಶಕ್ತಿ ತುಂಬಿದರು. ಇದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾವು ಸದಾ ಗಾಂಧಿ ಕುಟುಂಬಕ್ಕೆ ಚಿರಋಣಿಯಾಗಿರುತ್ತೇವೆ ಎಂದರು.

    ಛತ್ತೀಸಗಡ ರಾಯಪುರದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಗುಲ್ಬರ್ಗದ ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಅವರ ಸುದೀರ್ಘ 50 ವರ್ಷಗಳ ಪಯಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶ್ರಮಿಸುತ್ತಾ ಬಂದಿದ್ದಾರೆ.

    ಕಾಂಗ್ರೆಸ್ ಪಕ್ಷ ಬೇರೆ ಪಕ್ಷಗಳಿಗಿಂತ ಪ್ರಜಾಪ್ರಭುತ್ವ ಮಾದರಿಯಲ್ಲಿ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ತಾಲ್ಲÆಕು ಯೂತ್ ಕಾಂಗ್ರೆಸ್ ಸದಸ್ಯನಾಗಿದ್ದ ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಸೇವೆ ಮಾಡಲು ಅವಕಾಶ ದೊರೆತಿದೆ. ರಾಹುಲ್ ಗಾಂಧಿ ಅವರು ದೇಶದುದ್ದಕ್ಕು ಪಾದಯಾತ್ರೆ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇರುವ ಸಮಯದಲ್ಲಿ ಅವರು ಭಾರತ ಜೋಡೋ ಯಾತ್ರೆ ಮಾಡಿದರು. ಏಕಕಾಲಕ್ಕೆ 3500 ಕಿ.ಮೀ ಪಾದಯಾತ್ರೆ ಮಾಡಿದ್ದು ದೇಶದ ಇತಿಹಾಸದಲ್ಲೇ ಮೊದಲು. ಯಾವುದೇ ಪಕ್ಷ ಅಥವಾ ನಾಯಕರು ಇಂತಹ ಸಾಹಸ ಮಾಡಿಲ್ಲ ಎಂದರು.

    ರಾಹುಲ್ ಗಾಂಧಿ ಅವರು ಈ ಪಾದಯಾತ್ರೆ ಮೂಲಕ ದೇಶದ ಜ್ವಲಂತ ಸಮಸ್ಯೆಗಳಾದ ಕೋಮು ಸಂಘರ್ಷ, ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ, ದೇಶದ ಜನ ಕಾಂಗ್ರೆಸ್ ಮೇಲೆ ನಂಬಿಕೆ ಇಡುವಂತೆ ಮಾಡಿದ್ದಾರೆ. ದೇಶದ ಎಲ್ಲ ಕಾಂಗ್ರೆಸ್ಸಿಗರ ಪರವಾಗಿ ನಮಗೆ ಶಕ್ತಿ ತುಂಬಿದ್ದಕ್ಕಾಗಿ, ಕಾರ್ಯಕರ್ತನಂತೆ ಶ್ರಮಿಸುತ್ತಿರುವುದಕ್ಕೆ ಧನ್ಯವಾದಗಳು. ಅವರು ಪ್ರಧಾನ ಮಂತ್ರಿ ಹುದ್ದೆ ತ್ಯಾಗಮಾಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ರಾಷ್ಟçಪತಿಯಾಗಿದ್ದ ಅಬ್ದುಲ್ ಕಲಾಂ ಅವರು ಪ್ರಧಾನಮಂತ್ರಿಯಾಗಿ ಸರ್ಕಾರ ರಚನೆಗೆ ಆಹ್ವಾನ ನೀಡಿದಾಗ ಅವರು ದೇಶದ ಹಿತಕ್ಕಾಗಿ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಹುದ್ದೆ ನೀಡಿದರು. ಇದು ಕಾಂಗ್ರೆಸ್ ಪಕ್ಷದ ಇತಿಹಾಸ ಎಂದರು.

    ಮನಮೋಹನ್ ಸಿಂಗ್ ಅವರ ನೇತೃತ್ವದ ಸರ್ಕಾರದಲ್ಲಿ ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕಿನಂತಹ ಕ್ರಾಂತಿಕಾರಿ ಯೋಜನೆ ನೀಡಲಾಯಿತು. ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ ಎಂದು ಕೆಲವರು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸಂವಿಧಾನ, ಜನಪರ ತಿದ್ದುಪಡಿ ಮಾಡಿ ದೇಶವನ್ನು ಜಾಗತಿಕ ಮಟ್ಟದಲ್ಲಿ ತಲೆ ಎತ್ತಿ ನಿಲ್ಲುವಂತೆ ಮಾಡಿದೆ. ಇಂದು ಕರ್ನಾಟಕ ರಾಜ್ಯ ಚುನಾವಣೆ ಎದುರಿಸುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ದೇಶಕ್ಕೆ ಸಂದೇಶ ರವಾನೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದರು.

    ಕರ್ನಾಟಕದಲ್ಲಿ ನಾವು 3 ಪ್ರಮುಖ ಯೋಜನೆ ಘೋಷಣೆ ಮಾಡಿದ್ದು, ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ, ಪ್ರತಿ ಮನೆಯೊಡತಿಗೆ ತಿಂಗಳಿಗೆ 2000 ರೂ. ಆರ್ಥಿಕ ನೆರವು, ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಆಹಾರ ಭದ್ರತಾ ಕಾಯ್ದೆಯಡಿ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಘೋಷಿಸಿದ್ದೇವೆ. ಬಿಜೆಪಿ ಸರ್ಕಾರ ತಾನು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯಲಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap