ಕೈ ಹಿಡಿತಾರ ಮಾಜಿ ಬಿಜೆಪಿ ಶಾಸಕ…!

ಧಾರವಾಡ:

       ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ ಅವರು ಸೋಮವಾರ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

      ಧಾರವಾಡ ಜಿಲ್ಲೆಯ ಬಿಜೆಪಿ ನಾಯಕಾರದ ಶಂಕರ್ ಪಾಟೀಲ್ ಮುನೇನಕೊಪ್ಪ ಮತ್ತು ಎಸ್‍ಐ ಚಿಕ್ಕನಗೌಡ ಅವರು ಕಾಂಗ್ರೆಸ್‍ ಸೇರುತ್ತಾರೆ ಎಂಬ ವರದಿಗಳ ನಡುವೆ, ಈ ಇಬ್ಬರು ನಾಯಕರು ನಮ್ಮ ಪಕ್ಷಕ್ಕೆ ಬಂದರೆ ಜಿಲ್ಲೆಯಲ್ಲಿ ಮತ್ತಷ್ಟು ಬಲ ಬರಲಿದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

    ಮುನೇನಕೊಪ್ಪ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಎನ್​​ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ಕರೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap