ಬೆಂಗಳೂರು
ಬೆಂಗಳೂರು ಮಹಾನಗರ ಸಾರಿಗೆಯ ಬಸ್ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಸಲ ಅಪಘಾತವೆಸಗಿದ್ದರೇ 6 ತಿಂಗಳು ಅಮಾನತು ಮಾಡುತ್ತೇವೆ. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇನ್ಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ ಎಂದರು.
