ಬೊಮ್ಮಾಯಿ ಸಂಪುಟ ; 29 ಮಂದಿಗೆ ಒಲಿದ ಸಚಿವ ಸ್ಥಾನ!!

ಬೆಂಗಳೂರು: 

      ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಸಚಿವರ ವಿವರ ನೀಡಿದ್ದಾರೆ.

      ಇಂದು ಬೆಳಗ್ಗೆ ನೂತನ ಸಚಿವರ ಪಟ್ಟಿ ಅಂತಿಮವಾಗಿದ್ದು, ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ 29 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

  • 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
  • 2.ಆರ್.ಅಶೋಕ್- ಪದ್ಮನಾಭ ನಗರ
  • 3.ಬಿಸಿ ಪಾಟೀಲ್ – ಹಿರೇಕೇರೂರು
  • 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
  • 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
  • 6.ಉಮೇಶ್ ಕತ್ತಿ- ಹುಕ್ಕೇರಿ
  • 7.ಎಸ್.ಟಿ.ಸೋಮಶೇಖರ್- ಯಶವಂತಪುರ
  • 8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
  • 9.ಬೈರತಿ‌ ಬಸವರಾಜ – ಕೆ ಆರ್ ಪುರಂ
  • 10.ಮುರುಗೇಶ್ ನಿರಾಣಿ – ಬಿಳಿಗಿ
  • 11.ಶಿವರಾಂ ಹೆಬ್ಬಾರ್- ಯಲ್ಲಾಪುರ
  • 12.ಶಶಿಕಲಾ ಜೊಲ್ಲೆ- ನಿಪ್ಪಾಣಿ
  • 13.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ
  • 14.ಸುನೀಲ್ ಕುಮಾರ್ – ಕಾರ್ಕಳ
  • 15.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
  • 16.ಗೋವಿಂದ ಕಾರಜೋಳ-ಮುಧೋಳ
  • 17.ಮುನಿರತ್ನ- ಆರ್ ಆರ್ ನಗರ
  • 18.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
  • 19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
  • 20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
  • 21.ಹಾಲಪ್ಪ ಆಚಾರ್ – ಯಲ್ಬುರ್ಗ
  • 22.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
  • 23.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
  • 24.ಪ್ರಭು ಚೌವ್ಹಾಣ್ – ಔರಾದ್
  • 25.ವಿ ಸೋಮಣ್ಣ – ಗೋವಿಂದ್ ರಾಜನಗರ
  • 26.ಎಸ್ ಅಂಗಾರ-ಸುಳ್ಯ
  • 27.ಆನಂದ್ ಸಿಂಗ್ – ಹೊಸಪೇಟೆ
  • 28.ಸಿ ಸಿ‌ ಪಾಟೀಲ್ – ನರಗುಂದ
  • 29.ಬಿಸಿ ನಾಗೇಶ್ – ತಿಪಟೂರು

      ಇನ್ನು ಉಪ ಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಹೈಕಮಾಂಡ್ ತೀರ್ಮಾನಿಸಿದೆ. ರಾಜ್ಯದ ಏಳಿಗೆ, ಪ್ರದೇಶವಾರು, ಜಾತೀಯವಾರು ಸಮಾನತೆ ನೋಡಿಕೊಂಡು ಹಾಗೂ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap