ನನಗೆ ಟಿಕೆಟ್ ಕೈ ತಪ್ಪುವುದಕ್ಕೆ ಬೊಮ್ಮಾಯಿ ಅವರೇ ಕಾರಣ : ಓಲೇಕಾರ್‌

ಹಾವೇರಿ 

      ಮೂಲ ಬಿಜೆಪಿ ನಾಯಕರು ಟಿಕೆಟ್ ಕೈತಪ್ಪಿದ್ದಕ್ಕೆ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲಿ ಶಾಸಕ ನೆಹರು ಓಲೇಕಾರ್ ವಾಗ್ದಾಳಿ ಮಾಡಿದ್ದಾರೆ. ಪಕ್ಷದವರೇ ಬಹಿರಂಗವಾಗಿ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನೆಹರು ಓಲೇಕಾರ್, ‘ನನಗೆ ಟಿಕೆಟ್ ಕೈ ತಪ್ಪುವುದಕ್ಕೆ ಬೊಮ್ಮಾಯಿ ಅವರೇ ಕಾರಣ’ ಎಂದಿದ್ದಾರೆ.

     ‘ಧಮ್ ಇದ್ದರೆ ಬೊಮ್ಮಾಯಿ ತೋರಿಸಲಿ, ನಮ್ಮ ತಾಕತ್ತು ಎಷ್ಟು ಇದೆ ಅಂತ ನಾವು ತೋರಿಸುತ್ತೇವೆ. ಅವರೂ ಅವರ ತಾಕತ್ತು ತೋರಿಸಲಿ. ಬೊಮ್ಮಾಯಿ ಸಾಕಷ್ಟು ಕಳಪೆ ಕೆಲಸ ಮಾಡಿದ್ದಾರೆ. 15000ಕೋಟಿ ಹನಿ ನೀರಾವರಿ ಹಣವನ್ನು ಕೊಳ್ಳೆ ಹೊಡೆದಿದ್ದಾರೆ. ಇದೆಲ್ಲವೂ ಬಯಲಾಗಲಿದೆ’ ಎಂದು ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಆಕ್ರೋಶಗೊಂಡಿದ್ದಾರೆ.

     ಓಲೇಕಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ್ ಬೊಮ್ಮಾಯಿ ಅವರು,’15000ಕೋಟಿ ಹನಿ ನೀರಾವರಿ ಹಣವನ್ನು ಕೊಳ್ಳೆ ಹೊಡೆದಿದ್ದರೆ. ಅದರ ದಾಖಲೆ ತೋರಿಸಲಿ. ದಾಖಲೆ ಸಮೇತ ಆರೋಪ ಮಾಡಲಿ, ಹೇಳಿಕೆಯಿಂದ ಎಲ್ಲವೂ ನಿಜವಾಗುವುದಿಲ್ಲ. ಯಾವ ಆರೋಪ ಬೇಕಾದರೂ ಮಾಡಲಿ. ಯಾವುದೇ ಆರೋಪ ದಾಖಲೆ ಸಮೇತ ಮಾಡಲಿ’ ಎಂದು ಸವಾಲು ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap