ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಅಕ್ರಮ :ಹೊತ್ತಿ ಉರಿದ ಬಿಹಾರ

ಪಾಟ್ನಾ:

   ಡಿಸೆಂಬರ್ 13 ರಂದು ನಡೆದ ಬಿಹಾರ  ಲೋಕಸೇವಾ ಆಯೋಗದ   ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಹೀಗಾಗಿ ಆ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪರೀಕ್ಷಾರ್ಥಿಗಳು ಪ್ರತಿಭಟನೆ  ನಡೆಸಿದ್ದರು. ಪತಿಭಟನಾಕಾರರನ್ನು ನಿಯಂತ್ರಣಕ್ಕೆ ತರಲು ಭಾನುವಾರ ಪೊಲೀಸರು ಜಲಫಿರಂಗಿ ಮತ್ತು ಲಾಠಿ ಚಾರ್ಜ್ ಮಾಡಿದ್ದಾರೆ.

  ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್  ಅವರ ನೇತೃತ್ವದಲ್ಲಿ ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

  ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಚಂದ್ರಶೇಖರ್‌ ಸಿಂಗ್‌ ಮಾತನಾಡಿ ಪ್ರತಿಭಟನಾಕಾರರು ಪರವಾನಗಿ ಪಡೆಯದೆ ಮುಖ್ಯಮಂತ್ರಿಗಳ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಸಜ್ಜಾಗಿದ್ದರು. ಜೆಪಿ ಗೊಲುಂಬರ್ ಕಡೆಗೆ  ಮೆರವಣಿಗೆ ನಡೆಸುವಾಗ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದರು. ಜಿಲ್ಲಾಡಳಿತದ ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನಾಕಾರರು ಗಾಂಧಿ ಮೈದಾನದಲ್ಲಿ ಗಲಾಟೆ ನಡೆಸಿದ್ದಾರೆ. ಮೈದಾನದಲ್ಲಿ ವಿದ್ಯಾರ್ಥಿಗಳ ಕೂಟ ಆಯೋಜಿಸಿದ್ದಕ್ಕಾಗಿ ಪ್ರಶಾಂತ್ ಕಿಶೋರ್, ಅವರ ಪಕ್ಷದ ಅಧ್ಯಕ್ಷ ಮನೋಜ್ ಭಾರತಿ, ಹಾಗೂ ಬೋಧಕ ರಮಾಂಶು ಮಿಶ್ರಾ ಸೇರಿದಂತೆ ಒಟ್ಟು 21 ಜನರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

  ಪ್ರತಿಭಟನೆಯ ನೇತಾರ ಕಿಶೋರ್‌ ಕುಮಾರ್‌ ಬಿಹಾರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜ್ಯದ ಯುವಕರ ಸಮಸ್ಯೆಗಳನ್ನು ಪರಿಹರಿಸುವ ಬದಲು ದೆಹಲಿಗೆ ಖಾಸಗಿ ಭೇಟಿಗೆ ಆದ್ಯತೆ ನೀಡಿದ್ದಾರೆ ಎಂದು ಟೀಕಿಸಿದರು.

  ಪ್ರತಿಭಟನಾ ನಿರತ ಆಕಾಂಕ್ಷಿಗಳ ಅಹವಾಲು ಆಲಿಸಲು ಮುಖ್ಯಮಂತ್ರಿಗೆ ಸಮಯವಿಲ್ಲದೇ ದೆಹಲಿಗೆ ತೆರಳಿದ್ದಾರೆ. ಪರೀಕ್ಷೆ ರದ್ದುಗೊಳಿಸಬೇಕು ಎಂಬ ತಮ್ಮ ಬೇಡಿಕೆಯನ್ನು ಅಂಗೀಕರಿಸದವರೆಗೂ ಪ್ರತಿಭಟನೆ ಮುಂದುವರಿಯಲಿದೆ. ನಾನು ಯಾವಾಗಲೂ ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಇರುತ್ತೇನೆ ಎಂದು ಬಿಪಿಎಸ್‌ಸಿ ಆಕಾಂಕ್ಷಿಗಳನ್ನು ಉದ್ದೇಶಿಸಿ ಕಿಶೋರ್ ಹೇಳಿದರು. ಐವರು ಸದಸ್ಯರ ವಿದ್ಯಾರ್ಥಿ ನಿಯೋಗದೊಂದಿಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳನ್ನ ಭೇಟಿ ಮಾಡುವುದಾಗಿ ಘೋಷಣೆ ಅವರು ಘೋಷಣೆ ಮಾಡಿದ್ದಾರೆ.
   ಡಿಸೆಂಬರ್ 30 ರಂದು BPSC ಮರು ಪರೀಕ್ಷೆಗೆ ಸಂಬಂಧಿಸಿದಂತೆ ಬಿಹಾರ ಬಂದ್ ಮತ್ತು ಚಕ್ಕಾ ಜಾಮ್ ಅನ್ನು ಘೋಷಿಸಿದೆ. ಸಿಪಿಐ ಕೂಡ ಈ ಆಂದೋಲನಕ್ಕೆ ಬೆಂಬಲ ಘೋಷಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲು ಯಾವಾಗ ಮೆರವಣಿಗೆ ನಡೆಸಬೇಕು ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
  ಸುದ್ದಿಗಾರರೊಂದಿಗೆ ಮಾತನಾಡಿದ ಬಿಪಿಎಸ್‌ಸಿ ಆಕಾಂಕ್ಷಿಯೊಬ್ಬರು, “ಸರ್ಕಾರವು ನಮ್ಮನ್ನು ಈ ರೀತಿ ನಡೆಸಿಕೊಳ್ಳುತ್ತದೆ ಎಂದು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲ. ನಾವು ನಮ್ಮ ಸ್ವಂತ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ . ರಾಜಕೀಯ ಲಾಭಕ್ಕಾಗಿ ನಮಗೆ ಬೆಂಬಲಿಸಲು ಇಲ್ಲಿಗೆ ಬರುವವರೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link