ಲಂಚ: ವಾಣಿಜ್ಯ ತೆರಿಗೆ ಇಲಾಖೆ ಎಸಿ ಬಂಧನ

ಬೆಂಗಳೂರು: 

ಎಲೆಕ್ಟ್ರಿಕಲ್‌ ಮತ್ತು ಹಾರ್ಡ್‌ವೇರ್‌ ಉದ್ಯಮಿಯೊಬ್ಬರಿಗೆ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ನೋಂದಣಿ ಪ್ರಮಾಣಪತ್ರ ನೀಡಲು ₹ 3,000 ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆ ಇಂದಿರಾನಗರ ಕಚೇರಿಯ ಸಹಾಯಕ ಆಯುಕ್ತೆ ಪ್ರಿಯಾಂಕಾ ಜಿ.ಸಿ.ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿದೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಮಂಜುನಾಥನಗರದ ಕಲ್ಕೆರೆ ನಿವಾಸಿಯೊಬ್ಬರು ಜಿಎಸ್‌ಟಿ ಪ್ರಮಾಣಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು. ದಾಖಲೆಯಲ್ಲಿ ಅಂಚೆ ಪೆಟ್ಟಿಗೆ ಸಂಖ್ಯೆಯನ್ನು ಅರ್ಜಿಯಲ್ಲಿ ತಪ್ಪಾಗಿ ನಮೂದಿಸಿದ್ದರು. ಇದರಿಂದಾಗಿ ‍ಪ್ರಮಾಣಪತ್ರ ವಿತರಿಸಿರಲಿಲ್ಲ. ಅರ್ಜಿಯಲ್ಲಿನ ತಪ್ಪು ಸರಿಪಡಿಸಿ, ಪ್ರಮಾಣಪತ್ರ ನೀಡಲು ₹ 10,000 ಲಂಚ ನೀಡುವಂತೆ ಆರೋಪಿ ಬೇಡಿಕೆ ಇಟ್ಟಿದ್ದರು.

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

ಚೌಕಾಸಿ ಮಾಡಿದಾಗ ₹ 3,000 ನೀಡಿದರೆ ಪ್ರಮಾಣಪತ್ರ ಕೊಡುವುದಾಗಿ ತಿಳಿಸಿದ್ದರು. ಈ ಕುರಿತು ಅರ್ಜಿದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ಸಲ್ಲಿಸಿದ್ದರು. ಶುಕ್ರವಾರ ಅರ್ಜಿದಾರರಿಂದ ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ಪ್ರಿಯಾಂಕಾ ಅವರನ್ನು ಬಂಧಿಸಿದ್ದಾರೆ.

 ಹುಬ್ಬಳ್ಳಿ ಸರ್ಕಿಟ್ ಹೌಸ್ ನಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ..!

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link