ಬಿಪಿಎಲ್ ದುರ್ಬಳಕೆ ತಡೆಗೆ ಕಾನೂನು: ಸಚಿವ ಕೆ.ಗೋಪಾಲಯ್ಯ

ಬೆಂಗಳೂರು:

ಬಿಪಿಎಲ್ ಕಾರ್ಡ್ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಇದರ ದುರ್ಬಳಕೆಗೆ ಕಡಿವಾಣ ಹಾಕಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಉಳ್ಳವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.

ಅರ್ಹ ಫಲಾನುಭವಿಗೆ ಬಿಪಿಎಲ್ ಕಾರ್ಡ್ ನೀಡುತ್ತಿದ್ದು, ಇದನ್ನು ದುರುಪಯೋಗ ಮಾಡಿಕೊಂಡರೆ, ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ ಅವರು, ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಮಂದಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಅರ್ಹರಿಗೆ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು.
ಬಡವರಿಗಾಗಿ ಇರುವ ಬಿಪಿಎಲ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳಬಾರದು. ಈಗಾಗಲೇ ಹಲವು ಮಂದಿ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಪರಿಶೀಲಿಸಿದ ನಂತರ ಆ ಕಾರ್ಡ್ ರದ್ದುಪಡಿಸಲಾಗುತ್ತಿದೆ ಎಂದರು.

ಸ್ವಂತಮನೆ, 2-3 ಮಹಡಿಯ ಮನೆ ಕಟ್ಟಿಕೊಂಡವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು ತಿಳಿಸಿದ ಅವರು, ಕೇಂದ್ರ ಸರ್ಕಾರ ದೇಶದಲ್ಲಿ ಎಂಬತ್ತು ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮೂಲಕ ಆಹಾರ ಒದಗಿಸುತ್ತಿದ್ದು, ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದರು.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link