![ಮಾಜಿ ಸಿಎಂ ಬಿಎಸ್ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ](https://assets-news-bcdn.dailyhunt.in/cmd/resize/600x400_90/fetchdata16/images/73/8c/11/738c118013070a823072abc754498d4b17b6217d037b06c54d4a4c95fa6712cd.webp)
ಸೌಂದರ್ಯ ಆತ್ಮಹತ್ಯೆ ಕಾರಣ ಪ್ರಸವ ನಂತರದ ಖಿನ್ನತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಇಂಡಿಯಾ ಟುಡೆ ಮಾಧ್ಯಮದ ಜತೆ ಮಾತನಾಡಿದ ಅವರು ಪ್ರಸವದ ನಂತರ ಸೌಂದರ್ಯ ಖಿನ್ನತೆಯ ವಿರುದ್ಧ ಹೋರಾಡುತ್ತಿದ್ದರು. ಇದು ಅವರ ಕುಟುಂಬಕ್ಕೂ ತಿಳಿದಿತ್ತು ಎಂದಿದ್ದಾರೆ.
ಆತ್ಮಹತ್ಯೆಯಲ್ಲಿ ಯಾವುದೇ ಅನುಮಾನವಿಲ್ಲ. ಮಗು ಹುಟ್ಟಿದ ಬಳಿಕ ಆಕೆ ಖಿನ್ನತೆಯಿಂದ ಬಳಲುತ್ತಿದ್ದದ್ದು ನಮಗೆಲ್ಲರಿಗೂ ತಿಳಿದಿದೆ. ಮೊಮ್ಮಗಳನ್ನು ಸಂತೋಷ ಪಡಿಸಲು ಸ್ವತಃ ಯಡಿಯೂರಪ್ಪನವರೇ ಅನೇಕ ಬಾರಿ ತಮ್ಮ ಮನೆಗೆ ಕರೆಸಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.
ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಯಿಂದ ಬಿಎಸ್ವೈ ತುಂಬಾ ಬೇಸರಗೊಂಡಿದ್ದಾರೆಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ, ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ನಿನ್ನೆ (ಜ.28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಮೂರು ವರ್ಷಗಳ ಹಿಂದೆ ಅಂದರೆ 2018ರಲ್ಲಿ ವೈದ್ಯ ಡಾ.ನೀರಜ್ ಜತೆ ಮದುವೆ ಆಗಿತ್ತು. ಒಂದು ವರ್ಷದ ಗಂಡು ಮಗು ಕೂಡ ಇವರಿಗಿದೆ.
ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್ಗೆ ಕೆಲಸದವರು ಕರೆ ಮಾಡಿದ್ದರು.
ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಅಬ್ಬಿಗೆರೆಯಲ್ಲಿರುವ ನೀರಜ್ ಫಾರ್ಮ್ ಹೌಸ್ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/01/Capture-267.gif)